ರಾಜ್ಯ

ಕರ್ನಾಟಕದಲ್ಲಿ ಮುಂದಿನ ಐದು ದಿನಗಳಲ್ಲಿ ಭರ್ಜರಿ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಅಬ್ಬರಿಸಿದ್ದ ಮುಂಗಾರು ಮಳೆ ಸದ್ಯಕ್ಕೆ ಹಲವು ಜಿಲ್ಲೆಗಳಲ್ಲಿ ತಣ್ಣಗಾಗುವ ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿನ ಬದಲಾವಣೆ ಸಂದರ್ಭದಲ್ಲಿ ಕಳೆದ ಶನಿವಾರದಿಂದ ಮಲೆನಾಡು, ಕರಾವಳಿಯಲ್ಲಿ ಭಾರೀ ಆರ್ಭಟ ಮುಂದುವರೆಸಿತ್ತು. ಇದೇ ವೇಳೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿಗೆ ಮಳೆ ಆಗಿರಲಿಲ್ಲ.

ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಲಿದ್ದಾನೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಮುಂಗಾರು ಮಳೆ ಶಾಕ್‌ ನೀಡಿದೆ. ಕೇವಲ ಕರ್ನಾಟಕ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬರುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ಪೈಕಿ ಮೊದಲ ಮೂರು ದಿನ ಅಂದರೆ ಇಂದಿನಿಂದ ಜುಲೈ.5ರವರೆಗೆ ಸಾಧಾರಣದಿಂದ ಮಳೆ ಆಗಲಿದೆ. ಹೀಗಾಗಿ ಮೂರು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನಂತರ ಎರಡು ದಿನ ಕರಾವಳಿಯಲ್ಲೇ ಮಳೆ ತೀವ್ರಗೊಳ್ಳಲಿದೆ. ಜುಲೈ.6 ಮತ್ತು 7ರಂದು ಕರಾವಳಿಯ ಇದೇ ಮೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಆಗುವ ಲಕ್ಷಣವಿದೆ. ಆದ್ದರಿಂದ ಈ ಎರಡು ದಿನ ಆರೆಂಜ್‌ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಇನ್ನೂ ಮುಂದಿನ ಐದು ದಿನಗಳಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಇಲ್ಲಿ ಜೋರಾಗಿದ್ದ ಮಳೆಯಬ್ಬರ ಇದೀಗ ಇಳಿಕೆ ಆಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ದಾವಣಗೆರೆ, ಬಳ್ಳಾರಿ, ಕೋಲಾರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸಾಮಾನ್ಯ ಮಳೆ ಬರುವ ಮುನ್ಸೂಚನೆಯಿದೆ.

ಇನ್ನೂ ವಿಪರ್ಯಾಸವೆಂದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸುಸೂತ್ರವಾಗಿ ಮಳೆ ಆಗುತ್ತಿಲ್ಲ. ಇಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆ ಬಂದರೆ ಮತ್ತೆ ಕೆಲವು ಜಿಲ್ಲೆಗಳಿಗೆ ಮಳೆಯೇ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರು ಉತ್ತಮ ಮಳೆಗೆ ಕಾಯುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago