ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡಿದ್ದು, ಭಾರೀ ಗಾಳಿ ಬೀಸುತ್ತಿದೆ. ಪರಿಣಾಮ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನೂ ಮಂಡ್ಯ, ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲೂ ಅತ್ಯಧಿಕ ಮಳೆಯಾಗಲಿದೆ. ವಿಶೇಷವಾಗಿ ಕೊಡಗಿನಲ್ಲಿ ಇನ್ನೆರಡು ದಿನ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗಿನಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ನದಿಗಳ ಬಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ಇನ್ನೆರಡು ದಿನ ಕೊಡಗಿನ ಜನತೆ ಬಹಳ ಎಚ್ಚರಿಕೆ ವಹಿಸುವಂತೆ ಕೊಡಗು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…