ಬೆಂಗಳೂರು: ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಕೋರ್ಟ್ಗೆ ಓಡುತ್ತಾರೆ ಎಂದರು.
ಬಿಜೆಪಿ ನಾಯಕರ ಮೇಲೆ 35ಕ್ಕೂ ಹೆಚ್ಚು ಪ್ರಕರಣಗಳಿವೆ. ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಈ ಎಲ್ಲಾ ಪ್ರಕರಣಗಳನ್ನು ರಾಜ್ಯ ಸರ್ಕಾರ ಸೂಕ್ಷ್ಮವಾಗಿ ಗಮನಿಸಿದೆ. ಎಲ್ಲಾ ಪ್ರಕರಣಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ತೀವ್ರ ಭ್ರಷ್ಟಾಚಾರ ಇತ್ತು. ಅದರ ಮೇಲೆ ಈಗ ತನಿಖೆ ಶುರು ಮಾಡಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಅರ್ಧದಷ್ಟು ಬಿಜೆಪಿ ನಾಯಕರು ಜಾಮೀನಿಗಾಗಿ ಓಡುತ್ತಾರೆ ಅಥವಾ ಜೈಲಿನಲ್ಲಿರುತ್ತಾರೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅವ್ಯವಸ್ಥೆಗೆ ರಾಜ್ಯಪಾಲರಾದ ಗೆಹ್ಲೋಟ್ ಕಾರಣರಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಅವರು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…
ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…
ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…
ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…