ರಾಜ್ಯ

ಕರ್ನಾಟಕದಲ್ಲಿ ಮತ್ತೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸರಕಾರ ತರಲು ಶ್ರಮಿಸುತ್ತೇನೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರಾಮನಗರ: ರಾಜ್ಯದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚಿಸಲು ಶ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಎನ್‌ಡಿಎ ಸರ್ಕಾರವನ್ನು ತರಲು ಬಿಜೆಪಿ, ಜೆಡಿಎಸ್‌ನ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್‌ ಪಕ್ಷ ಮತ್ತೊಮ್ಮೆ ಕಾಂಗ್ರೆಸ್‌ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾರು ಸಿಎಂ ಆಗಬೇಕು ಎಂಬುದು ನನಗೆ ಮುಖ್ಯವಲ್ಲ. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ನನಗೆ ರಾಜ್ಯ ಮತ್ತು ಜನರ ಕಲ್ಯಾಣ ಮತ್ತು ಅಭಿವೃದ್ಧಿ ಮುಖ್ಯ ಎಂದರು.

ರಾಜ್ಯದಲ್ಲಿ ಜನಪರ ಸರ್ಕಾರ ತರುವುದು ನಮಗೆ ಮುಖ್ಯವಾಗಿದೆ.  ಪ್ರತಿ ಕುಟುಂಬದ ಹಿತವನ್ನು ಬಯಸುವ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ತರಲು ಬಯಸುತ್ತೇವೆ. ಅದಕ್ಕಾಗಿ ಉಭಯ ಪಕ್ಷಗಳ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದ್ದು, ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲು ನಾಯಕರು ಈಗಿನಿಂದಲೇ ಶ್ರಮ ವಹಿಸಲಿದ್ದಾರೆ ಎನ್ನಲಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

30 seconds ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

1 hour ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

2 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

2 hours ago

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

3 hours ago

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

4 hours ago