ರಾಜ್ಯ

ಶರಣಾಗತರಾಗಿದ್ದ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್‌ ಆದೇಶ ಹೊರಡಿಸಿದೆ.

ಕರ್ನಾಟಕದ ಇತಿಹಾಸದಲ್ಲೇ ನಿನ್ನೆ ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ಡಿಜಿಪಿ ಅಲೋಕ್‌ ಮೋಹನ್‌ ಸಮ್ಮುಖದಲ್ಲಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ಶರಣಾಗತರಾಗಿದ್ದರು.

ಶರಣಾಗತರಾಗಿದ್ದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ.ವಸಂತ ಅಲಿಯಾಸ್‌ ರಮೇಶ್‌, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರನ್ನು ಇಂದು ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ವಾದ ಆಲಿಸಿದ ಕೋರ್ಟ್‌ ಆರು ಮಂದಿ ನಕ್ಸಲರಿಗೆ ಜನವರಿ.30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇನ್ನು ನಿನ್ನೆ ಬೆಳಿಗ್ಗೆ 7 ಗಂಟೆಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಸಂಜೆ ಆರು ಗಂಟೆಯ ವೇಳೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿದ ನಕ್ಸಲರ ತಂಡ ಪೊಲೀಸರಿಗೆ ಶರಣಾಗತರಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

2 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

2 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

2 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

2 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

2 hours ago