ರಾಜ್ಯ

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಸಚಿವ ಈಶ್ವರ ಖಂಡ್ರೆ

ಮೈಸೂರು : ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡು ಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ ಕೆಲವು ವಿಶೇಷ ಸಂದರ್ಭ ಅಂದರೆ ವೈದ್ಯಕೀಯ ತುರ್ತು ಇತ್ಯಾದಿ ಸಂದರ್ಭದಲ್ಲಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.

ಬಂಡಿಪುರದಲ್ಲಿ ರೈಲು ಮಾರ್ಗ ಅಥವಾ ಮೇಲ್ಸೇತುವೆ ನಿರ್ಮಾಣ ಕುರಿತಂತೆ ಸಮೀಕ್ಷೆ ಆಗಿಲ್ಲ ಎಂದು ತಿಳಿಸಿದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ: ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಅತ್ಯಗತ್ಯವಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ಹೀಗಾಗಿ ಬೆಳೆ ಹಾನಿ ಆಗದಂತೆ ಮತ್ತು ಜೀವ ಹಾನಿ ಆಗದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರ ಜೊತೆಗೆ ಅರಣ್ಯ ವಿಸ್ತರಣೆಗೆ ಆದ್ಯತೆ ನೀಡಲಾಗುವುದು ಎಂದರು.

7500 ಎಕರೆ ಅರಣ್ಯ ಭೂಮಿ ಗುತ್ತಿಗೆ: ಸ್ವಾತಂತ್ರ್ಯ ಪೂರ್ವದಲ್ಲಿ 7500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘ ಕಾಲದ ಅವಧಿಗೆ ಗುತ್ತಿಗೆ ನೀಡಿರುತ್ತಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದರು.

ಎಸ್ಟೇಟ್ ಗಳಿಗೆ ನೀಡಲಾಗಿರುವ ಅರಣ್ಯ ಭೂಮಿ ಗುತ್ತಿಗೆದಾರರಿಂದ ಬರಬೇಕಾದ ಬಾಕಿ ಮತ್ತು ಅವಧಿ ಮುಗಿದ ಅರಣ್ಯ ಭೂಮಿ ಮರುಪಡೆಯಲು ವಿಶೇಷ ತಂಡ ಮತ್ತು ಕಾನೂನು ಕೋಶವನ್ನು ರಚಿಸಲಾಗಿದೆ. ಈ ವಿಶೇಷ ತಂಡ ಗುತ್ತಿಗೆ ನೀಡಿದ ಅರಣ್ಯ ಭೂಮಿಯನ್ನು ಮರು ಪಡೆಯಲು ಕಾರ್ಯೋನ್ಮುಖವಾಗುತ್ತದೆ ಎಂದರು.

ಕೆಲವು ವರ್ಷಗಳ ಹಿಂದೆ ಹಾಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಬಿ.ಪಿ. ರವಿ ಅವರು, ಚಾಮರಾಜನಗರದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದಾಗ ಕೆಲವು ಕಂಪನಿಗಳು ಗುತ್ತಿಗೆ ಹಣವನ್ನು ಅರಣ್ಯ ಇಲಾಖೆಗೆ ಪಾವತಿಸಿಲ್ಲ ಎಂದು ನೋಟಿಸ್ ನೀಡಿದ್ದರು, ಈಗ ಎಸ್ಟೇಟ್ ನವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನಾವು ಕಾನೂನು ಹೋರಾಟ ಮಾಡಲು ವಿಶೇಷ ತಂಡ ರಚಿಸಿದ್ದೇವೆ ಎಂದರು.

ಆನೆ ದಾಳಿ ಸಾವು ದುರ್ದೈವ: ಕರ್ನಾಟಕದ ಅರಣ್ಯ ಇಲಾಖೆ ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಿದ್ದ ಆನೆಯೊಂದು ಕೇರಳದಲ್ಲಿ ದಾಳಿ ಮಾಡಿದ್ದು, ವ್ಯಕ್ತಿಯೊಬ್ಬರು ಸಾವಿಗೀಡಾಗಿರುವುದು ಅತ್ಯಂತ ದುಃಖ ಮತ್ತು ದುರ್ದೈವದ ಸಂಗತಿಯಾಗಿದೆ. ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಆದರೆ ಯಾವುದೇ ವನ್ಯ ಜೀವಿಯನ್ನು ಒಂದು ರಾಜ್ಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಆನೆಗಳು ಶತ ಶತಮಾನಗಳಿಂದ ತಮಿಳುನಾಡು, ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ಮುಕ್ತವಾಗಿ ಸಂಚರಿಸುತ್ತಿವೆ. ಆನೆ ಕಾರಿಡಾರ್ ಎಂದೇ ಇದಕ್ಕೆ ಕರೆಯಲಾಗುತ್ತದೆ. ಇದು ಕರ್ನಾಟಕದ ಆನೆ, ತಮಿಳುನಾಡು ಆನೆ, ಕೇರಳ ಆನೆ ಎಂದು ಬ್ರಾಂಡ್ ಮಾಡುವುದು ಸರಿಯಾದ ಕ್ರಮವಲ್ಲ ಎಂದರು.

ಪತ್ರಕರ್ತರು ಕರ್ನಾಟಕದ ಗಾಯಗೊಂಡ ಹುಲಿಯನ್ನು ಕೇರಳದ ಗಡಿಯಲ್ಲಿ ಬಿಡಲಾಗಿದೆ ಎಂಬ ಆರೋಪ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚಿರತೆ, ಹುಲಿ ಇತ್ಯಾದಿ ವನ್ಯ ಮೃಗಗಳು ಕೂಡ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗುವುದು ಸಹಜ. ವನ್ಯಜೀವಿಗಳಿಗೆ ಭಾಷೆ, ಗಡಿಯ ಮಿತಿ ಇರುವುದಿಲ್ಲ. ವನ್ಯ ಜೀವಿಗಳಿಗೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಮ್ಮ ಇಲಾಖೆ ಮತ್ತೊಂದು ರಾಜ್ಯದಲ್ಲಿ ವನ್ಯಜೀವಿ ಬಿಟ್ಟಿದೆ ಎಂಬುದು ನಿರಾಧಾರ ಆರೋಪ ಎಂದರು.

ಕಾಡ್ಗಿಚ್ಚಿನ ಬಗ್ಗೆ ಎಚ್ಚರಿಕೆ: ಬರುವ ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದ ಅರಣ್ಯಕ್ಕೆ ಹಾನಿ ಆಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಫೈರ್ ಲೈನ್ ಅಂದರೆ ಬೆಂಕಿ ರೇಖೆಯನ್ನು ನಿರ್ಮಿಸಲಾಗಿದೆ. ಅಗ್ನಿ ಶಾಮಕ ದಳದೊಂದಿಗೆ ಕೂಡ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಅಧಿಕೃತ ವರದಿ ಇದೆ. ಆದರೆ, ಇನ್ನೂ ಹೆಚ್ಚಿನ ಒತ್ತುವರಿ ಆಗಿರುವ ಬಗ್ಗೆ ದೂರುಗಳಿದ್ದು, ಒತ್ತುವರಿಯ ನಿಖರ ಮಾಹಿತಿ ನೀಡುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು. ಒತ್ತುವರಿ ತೆರವು ಮಾಡಲಾಗುವುದು ಎಂದರು.

andolanait

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

3 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

7 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

8 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

8 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

8 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

9 hours ago