Nikhil Kumaraswamy opinion Caste Census
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ (Caste Census) ವಿಚಾರದ ಕುರಿತು ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಅಂಶಗಳನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಆಗ್ರಹಿಸಿದರು.
ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು. ಜಾತಿ, ಧರ್ಮದ ಬಗ್ಗೆ ಚರ್ಚೆ ಮಾಡಿದರೆ ಯಾರ ಹೊಟ್ಟೆಯೂ ತುಂಬುವುದಿಲ್ಲ. ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಜಾತಿಗಣತಿ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಜಾತಿಗಣತಿ ವರದಿ ಅಂಶಗಳು ಸೋರಿಕೆಯಾಗಿವೆ. ಸಮೀಕ್ಷೆ ಬಗ್ಗೆ ಚರ್ಚೆಯಾಗುವ ಬದಲು ಆ ಜಾತಿ ಎಷ್ಟು, ಈ ಜಾತಿ ಎಷ್ಟು ಎಂಬ ಚರ್ಚೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಎಲ್ಲರ ಅಭಿಪ್ರಾಯದ ಬಳಿಕ ಜಾತಿಗಣತಿ ಬಗ್ಗೆ ಮುಂದಿನ ನಿರ್ಧಾರ: ಸಚಿವ ಪರಮೇಶ್ವರ್
ವರದಿ ಪೂರ್ಣಗೊಂಡ ಬಳಿಕ ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಹಾಕಿಲ್ಲ. ನಾವು ವರದಿಯನ್ನು ಸ್ವಾಗತ ಮಾಡಿದ್ದೇವೆ. ವಿರೋಧ ಮಾಡಿಲ್ಲ. ಜಾತಿಗಣತಿ ಅಂದರೆ ಯಾವ ಯಾವ ಸಮಾಜ, ಯಾವ ಜಾತಿ, ಅದರಡಿ ಬರುವ ಉಪಜಾತಿಗಳು ಸೇರುತ್ತವೆ. ಮುಸ್ಲಿಮರಲ್ಲಿ ಶಿಯಾ ಮತ್ತು ಸುನ್ನಿ ಸೇರಿದಂತೆ ಹಲವಾರು ಜಾತಿಗಳಿವೆ. ಜಾತಿ ಆಧಾರದ ಮೇಲೆ ಉಪಜಾತಿಗಳು, ಒಳಪಂಗಡಗಳ ಬಗ್ಗೆ ಗಣತಿ ಮಾಡಿದ್ದೀರಾ ಎಂಬುದು ಗೊತ್ತಿಲ್ಲ. ಸಂವಿಧಾನದಲ್ಲಿ ಜಾತಿಗಣತಿ ಬಿಡುಗಡೆ ಮಾಡುವ ಸರ್ವೇ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆಯೇ ಹೊರತು ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಅವರು ಹೇಳಿದರು.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…