nikhil kumaraswamy siddaramaiah
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಹೋರಾಡುವುದರಿಂದ ಹಿಡಿದು ಕಾಂಗ್ರೆಸ್ ಪಕ್ಷಕ್ಕೆ ಅಂಟಿಕೊಳ್ಳುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಪ್ರಯಾಣವು ಅವಕಾಶವಾದಕ್ಕೆ ಎತ್ತಿ ಹಿಡಿದ ಕೈ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 1983ರಲ್ಲಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ವಿರೋಧಿ ಪಕ್ಷವಾದ ಭಾರತೀಯ ಲೋಕದಳದೊಂದಿಗೆ ಪ್ರಾರಂಭಿಸಿದರು. ಕಾಂಗ್ರೆಸ್ನ ಸಿದ್ಧಾಂತವನ್ನು ವಿರೋಧಿಸುತ್ತಾ ದಶಕಗಳ ಕಾಲ ಕಳೆದಿರುವ ಸಿದ್ದರಾಮಯ್ಯನವರು ಈಗ ಹುಟ್ಟಿನಿಂದ ಕಾಂಗ್ರೆಸ್ಸಿಗರ ಪರವಾಗಿ ಹೋರಾಡಿದಂತೆ ಎದೆ ತಟ್ಟಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ವಿರೋಧಿ ಪಕ್ಷವಾದ ಭಾರತೀಯ ಲೋಕದಳದೊಂದಿಗೆ ತಮ್ಮ ಅವಧಿಯ ನಂತರ ಅವರು ಜನತಾ ಪಕ್ಷ, ನಂತರ ಜನತಾದಳ ಮತ್ತು ಜನತಾದಳ(ಜಾತ್ಯತೀತ)ಕ್ಕೆ ಸೇರಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಂಪುಟದಲ್ಲಿ ಮೊದಲ ಬಾರಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ ಅವರು, ಕಾಂಗ್ರೆಸ್ ವಿರುದ್ಧ ಹೋರಾಡುತ್ತಲೇ ಉಪಮುಖ್ಯಮಂತ್ರಿ ಸಹ ಆದರು ಎಂದಿದ್ದಾರೆ.
ಸದಾ ಕಾಲ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದ ಸಿದ್ದರಾಮಯ್ಯನವರು, ಒಂದು ಪಕ್ಷದಿಂದ ಇನ್ನೊಂದಕ್ಕೆ ಹಾರುವುದು ಅವರಿಗೇನು ಹೊಸದಲ್ಲ. 2005ರಲ್ಲಿ ಜೆಡಿಎಸ್ನಿಂದ ಹೊರಬಂದ ನಂತರ, ಅವರು ಪಕ್ಷವನ್ನು ರಚಿಸಿದರು, 2006ರಲ್ಲಿ ಅದನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಿದರು. ತಮ್ಮದೇ ಪಕ್ಷದ ಅಡಿಯಲ್ಲಿ ಒಂದು ಚುನಾವಣೆಯಲ್ಲೂ ಸ್ಪರ್ಧಿಸುವ ಸಾಹಸ ಮಾಡಲಿಲ್ಲ ಎಂಬುದು ನಿಗೂಢ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಅವರು ಮೂದಲಿಸಿದ್ದಾರೆ.
ಒಂದು ಕಾಲದಲ್ಲಿ ಕಾಂಗ್ರೆಸ್ ನಾಯಕರಾದ ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಕೆಂಡಕಾರುತ್ತಿದ್ದ ಸಿದ್ದರಾಮಯ್ಯನವರು, ಇಂದು ಅಧಿಕಾರಕ್ಕಾಗಿ ಅವರ ಸೇವೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ತಯಾರಿ ನಡೆಸುತ್ತಿರುವುದರಲ್ಲಿ ಆಶ್ಚರ್ಯವಿಲ್ಲ. ದ್ರೋಹದಿಂದ ಬದುಕುವವರು, ದ್ರೋಹದಿಂದಲೇ ಬೀಳುತ್ತಾರೆ. ಇತಿಹಾಸವು ಪುನರಾವರ್ತನೆಯಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…