ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ಒಬ್ಬರು ಗೆಲ್ಲಬೇಕಾದರೆ ಮತ್ತೊಬ್ಬರು ಸೋಲಬೇಕಾಗುತ್ತದೆ. ರಾಜಕಾರಣದಲ್ಲಿ ಇದನ್ನು ನಮ್ಮ ಕುಟುಂಬ ಸಮಚಿತ್ತವಾಗಿ ಸ್ವೀಕರಿಸಿದ್ದೇವೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಪುತ್ರ ನಿಖಿಲ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಿತನಾಗಿದ್ದೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು-ಗೆಲುವು ಇದ್ದೇ ಇರುತ್ತದೆ. ಅದನ್ನು ನಮ್ಮ ಕುಟುಂಬ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದು, ಗೆದ್ದಾಗ ಬೀಗಿಲ್ಲ ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ಇದು ನನ್ನ ಮಗನಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.
ನನ್ನ ಮಗ ಮೂರು ಸಲ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು, ಮನುಷ್ಯನಾಗಿ ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ತಾಯಿಯಾಗಿ ಮನಸ್ಸು ಮತ್ತು ಹೃದಯ ವೈಶಾಲ್ಯತೆ ಏನೆಂದು ನನಗೆ ಚೆನ್ನಾಗಿ ಗೊತ್ತು ಎಂದಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…