ರಾಜ್ಯ

ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಚುನಾವಣಾಧಿಕಾರಿಗೆ ನಿಖಿಲ್‌ ಕುಮಾರಸ್ವಾಮಿ ದೂರು !

ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದೆ.

ಲೋಕಸಭೆ ಚುನಾವಣೆಯಲ್ಲಿ ಜನರು ತಮಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸುತ್ತೇನೆ ಎಂದು ಶಾಕಸ ಬಾಲಕೃಷ್ಣ ಹೇಳಿದ್ದು, ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಪ್ರಕರಣವಾಗಿದೆ ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ.

ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಎಚ್‌. ಸಿ.ಬಾಲಕೃಷ್ಣ ಅವರ ಹೇಳಿಕೆಯು ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ.

ಈ ನಿಟ್ಟಿನಲ್ಲಿ ನಾನು ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಬಾಲಕೃಷ್ಣ ಹಾಗೆ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ.

ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಕಿಡಿಕಾರಿದರು. ಕಾಂಗ್ರೆಸ್, ದೇಶ ವಿರೋಧಿ ಮತ್ತು ಕರ್ನಾಟಕ ವಿರೋಧಿ ಪಕ್ಷ.

ಸಾರ್ವಜನಿಕರು ಕಾಂಗ್ರೆಸ್ಸಿಗರ ನಿಜವಾದ ಗುಣವನ್ನು ಅರ್ಥಮಾಡಿಕೊಂಡಿದ್ದಾರೆ, ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಲು ಹೋಗುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಈಗಾಗಲೇ ಅರಿವಾಗಿದೆ.

ಮುಂಬರುವ ಚುನಾವಣೆಗಳಲ್ಲಿ ಪಿಎಂ ಮೋದಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವುದು ಖಚಿತವಾಗಿದೆ ಹಾಗಾಗಿ ಹತಾಶೆಯಿಂದ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

6 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

7 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

7 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

8 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

8 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

8 hours ago