ರಾಜ್ಯ

ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಚುನಾವಣಾಧಿಕಾರಿಗೆ ನಿಖಿಲ್‌ ಕುಮಾರಸ್ವಾಮಿ ದೂರು !

ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದೆ.

ಲೋಕಸಭೆ ಚುನಾವಣೆಯಲ್ಲಿ ಜನರು ತಮಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸುತ್ತೇನೆ ಎಂದು ಶಾಕಸ ಬಾಲಕೃಷ್ಣ ಹೇಳಿದ್ದು, ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಪ್ರಕರಣವಾಗಿದೆ ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ.

ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಎಚ್‌. ಸಿ.ಬಾಲಕೃಷ್ಣ ಅವರ ಹೇಳಿಕೆಯು ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ.

ಈ ನಿಟ್ಟಿನಲ್ಲಿ ನಾನು ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಬಾಲಕೃಷ್ಣ ಹಾಗೆ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ.

ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಕಿಡಿಕಾರಿದರು. ಕಾಂಗ್ರೆಸ್, ದೇಶ ವಿರೋಧಿ ಮತ್ತು ಕರ್ನಾಟಕ ವಿರೋಧಿ ಪಕ್ಷ.

ಸಾರ್ವಜನಿಕರು ಕಾಂಗ್ರೆಸ್ಸಿಗರ ನಿಜವಾದ ಗುಣವನ್ನು ಅರ್ಥಮಾಡಿಕೊಂಡಿದ್ದಾರೆ, ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಲು ಹೋಗುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಈಗಾಗಲೇ ಅರಿವಾಗಿದೆ.

ಮುಂಬರುವ ಚುನಾವಣೆಗಳಲ್ಲಿ ಪಿಎಂ ಮೋದಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವುದು ಖಚಿತವಾಗಿದೆ ಹಾಗಾಗಿ ಹತಾಶೆಯಿಂದ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

andolanait

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

7 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

7 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

9 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

10 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

13 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

13 hours ago