ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ಶುದ್ಧ ಹಸ್ತ ಎಂದು ಪದೇ ಪದೇ ಹೇಳುವ ಸಿಎಂ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ನಾವು ಪಾದಯಾತ್ರೆ ಮಾಡಿದ್ದು ಸತ್ಯದ ಪರ. ಹೀಗಾಗಿಯೇ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಸದ್ಯ ಈಗ ಸಿದ್ದರಾಮಯ್ಯ ಸಂಕಷ್ಟದಲ್ಲಿದ್ದಾರೆ. ಅವರಿಗೆ ಬೇರೆ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಿಕೊಂಡು ರಾಜೀನಾಮೆ ನೀಡಬೇಕು. ಗೌರವಯುತವಾಗಿ ರಾಜೀನಾಮೆ ನೀಡಿ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…