ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ ಕಾರಣ ಕೊಟ್ಟಿದ್ದೇನೆ. ನಾನು ಸೋಲಿಗೆ ಹೆದರುವ ವ್ಯಕ್ತಿಯಲ್ಲ. ಇಂತಹ ಅನೇಕ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. ಸತತ ಸೋಲುಗಳ ಮೂಲಕ ಪಕ್ಷ ಫೀನಿಕ್ಸ್ನಂತೆ ಎದ್ದು ಬಂದಿದೆ.
ಈ ಸೋಲು ನನಗೆ ಭಾರೀ ನೋವುಂಟು ಮಾಡಿದೆ. ನಿಜ. ಇಲ್ಲ ಎಂದು ಹೇಳಿ ಆತ್ಮವಂಚನೆ ಮಾಡಿಕೊಳ್ಳುವುದಿಲ್ಲ. ಹಾಗಂತ ನಾನು ಸೋಲುತ್ತೇನೆ ಎಂದು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಗೆಲ್ಲಲು ಪ್ರಾಮಾಣಿಕವಾಗಿ ಹೋರಾಡಿದ್ದೇವೆ. ಮತ್ತೆ ಫುಟಿದೆದ್ದು ಬರುವ ಛಲ ನನಗಿದೆ. ಹಿಂದಿನ ಎರಡು ಸೋಲುಗಳು ನನಗೆ ಅಸಹಾಯಕತೆಯನ್ನು ಮೆಟ್ಟಿನಿಂತು ಅಪಮಾನ ಧಿಕ್ಕರಿಸಿ ಸೆಣಸುವ ಆತ್ಮಬಲ ಕೊಟ್ಟಿವೆ.
ಚನ್ನಪಟ್ಟಣದಲ್ಲೂ ಅದೇ ಛಲ, ಆತ್ಮಬಲದಿಂದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೂಡಿ ದಿಟ್ಟ ಹೋರಾಟ ನಡೆಸಿದ್ದೇನೆ.
ನನ್ನ ಸೋಲು ನನ್ನ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಇಡೀ ರಾಜ್ಯದ ಕಾರ್ಯಕರ್ತರೆಲ್ಲರೂ ವೀರಯೋಧರಂತೆ ಚನ್ನಪಟ್ಟಣದಲ್ಲಿ ಹಗಲಿರುಳು ದುಡಿದರು. ಅಂತಿಮವಾಗಿ ನನಗೆ ಸೋಲಾಯಿತು. ನಾನು ಅದನ್ನು ಶಿರಬಾಗಿ ಸ್ವೀಕರಿಸಿದ್ದೇನೆ ಎಂದು ಬರೆದುಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಧೈರ್ಯ ಹೇಳಿದ್ದಾರೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…