Categories: ರಾಜ್ಯ

ಜೆಡಿಎಸ್‌ ಕಾರ್ಯಕರ್ತರಿಗೆ ಪತ್ರ ಬರೆದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ ಕಾರಣ ಕೊಟ್ಟಿದ್ದೇನೆ. ನಾನು ಸೋಲಿಗೆ ಹೆದರುವ ವ್ಯಕ್ತಿಯಲ್ಲ. ಇಂತಹ ಅನೇಕ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. ಸತತ ಸೋಲುಗಳ ಮೂಲಕ ಪಕ್ಷ ಫೀನಿಕ್ಸ್‌ನಂತೆ ಎದ್ದು ಬಂದಿದೆ.

ಈ ಸೋಲು ನನಗೆ ಭಾರೀ ನೋವುಂಟು ಮಾಡಿದೆ. ನಿಜ. ಇಲ್ಲ ಎಂದು ಹೇಳಿ ಆತ್ಮವಂಚನೆ ಮಾಡಿಕೊಳ್ಳುವುದಿಲ್ಲ. ಹಾಗಂತ ನಾನು ಸೋಲುತ್ತೇನೆ ಎಂದು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಗೆಲ್ಲಲು ಪ್ರಾಮಾಣಿಕವಾಗಿ ಹೋರಾಡಿದ್ದೇವೆ. ಮತ್ತೆ ಫುಟಿದೆದ್ದು ಬರುವ ಛಲ ನನಗಿದೆ. ಹಿಂದಿನ ಎರಡು ಸೋಲುಗಳು ನನಗೆ ಅಸಹಾಯಕತೆಯನ್ನು ಮೆಟ್ಟಿನಿಂತು ಅಪಮಾನ ಧಿಕ್ಕರಿಸಿ ಸೆಣಸುವ ಆತ್ಮಬಲ ಕೊಟ್ಟಿವೆ.

ಚನ್ನಪಟ್ಟಣದಲ್ಲೂ ಅದೇ ಛಲ, ಆತ್ಮಬಲದಿಂದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೂಡಿ ದಿಟ್ಟ ಹೋರಾಟ ನಡೆಸಿದ್ದೇನೆ.

ನನ್ನ ಸೋಲು ನನ್ನ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಇಡೀ ರಾಜ್ಯದ ಕಾರ್ಯಕರ್ತರೆಲ್ಲರೂ ವೀರಯೋಧರಂತೆ ಚನ್ನಪಟ್ಟಣದಲ್ಲಿ ಹಗಲಿರುಳು ದುಡಿದರು. ಅಂತಿಮವಾಗಿ ನನಗೆ ಸೋಲಾಯಿತು. ನಾನು ಅದನ್ನು ಶಿರಬಾಗಿ ಸ್ವೀಕರಿಸಿದ್ದೇನೆ ಎಂದು ಬರೆದುಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಧೈರ್ಯ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

4 mins ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

2 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

3 hours ago