Categories: ರಾಜ್ಯ

ಜೆಡಿಎಸ್‌ ಕಾರ್ಯಕರ್ತರಿಗೆ ಪತ್ರ ಬರೆದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ ಕಾರಣ ಕೊಟ್ಟಿದ್ದೇನೆ. ನಾನು ಸೋಲಿಗೆ ಹೆದರುವ ವ್ಯಕ್ತಿಯಲ್ಲ. ಇಂತಹ ಅನೇಕ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. ಸತತ ಸೋಲುಗಳ ಮೂಲಕ ಪಕ್ಷ ಫೀನಿಕ್ಸ್‌ನಂತೆ ಎದ್ದು ಬಂದಿದೆ.

ಈ ಸೋಲು ನನಗೆ ಭಾರೀ ನೋವುಂಟು ಮಾಡಿದೆ. ನಿಜ. ಇಲ್ಲ ಎಂದು ಹೇಳಿ ಆತ್ಮವಂಚನೆ ಮಾಡಿಕೊಳ್ಳುವುದಿಲ್ಲ. ಹಾಗಂತ ನಾನು ಸೋಲುತ್ತೇನೆ ಎಂದು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಗೆಲ್ಲಲು ಪ್ರಾಮಾಣಿಕವಾಗಿ ಹೋರಾಡಿದ್ದೇವೆ. ಮತ್ತೆ ಫುಟಿದೆದ್ದು ಬರುವ ಛಲ ನನಗಿದೆ. ಹಿಂದಿನ ಎರಡು ಸೋಲುಗಳು ನನಗೆ ಅಸಹಾಯಕತೆಯನ್ನು ಮೆಟ್ಟಿನಿಂತು ಅಪಮಾನ ಧಿಕ್ಕರಿಸಿ ಸೆಣಸುವ ಆತ್ಮಬಲ ಕೊಟ್ಟಿವೆ.

ಚನ್ನಪಟ್ಟಣದಲ್ಲೂ ಅದೇ ಛಲ, ಆತ್ಮಬಲದಿಂದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೂಡಿ ದಿಟ್ಟ ಹೋರಾಟ ನಡೆಸಿದ್ದೇನೆ.

ನನ್ನ ಸೋಲು ನನ್ನ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಇಡೀ ರಾಜ್ಯದ ಕಾರ್ಯಕರ್ತರೆಲ್ಲರೂ ವೀರಯೋಧರಂತೆ ಚನ್ನಪಟ್ಟಣದಲ್ಲಿ ಹಗಲಿರುಳು ದುಡಿದರು. ಅಂತಿಮವಾಗಿ ನನಗೆ ಸೋಲಾಯಿತು. ನಾನು ಅದನ್ನು ಶಿರಬಾಗಿ ಸ್ವೀಕರಿಸಿದ್ದೇನೆ ಎಂದು ಬರೆದುಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಧೈರ್ಯ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

2 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

2 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

4 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

4 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

8 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

8 hours ago