Categories: ರಾಜ್ಯ

ಅಲ್ಪಸಂಖ್ಯಾತರತ್ತ ಬೊಟ್ಟು ಮಾಡಿದ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಅವರೀಗ ಅಲ್ಪಸಂಖ್ಯಾತರತ್ತ ಮತ್ತೆ ಬೊಟ್ಟು ಮಾಡಿ ತೋರಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಯ ಕಡೆಗೆ ಗಮನ ಹರಿಸಿದ್ದೆವು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಹಾದಿಯಲ್ಲಿದ್ದೆವು. ಆದರೆ ಅವರು ನಮ್ಮನ್ನು ತಿರಸ್ಕರಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪಕ್ಷದ ಮೇಲೆ ಗೌರವ ಇರುವ ಜನರು ನಮ್ಮನ್ನು ಕೈಬಿಟ್ಟಿಲ್ಲ. ಯಾವುದೇ ಕಾರ್ಯಕರ್ತ ನಿಂತರೂ ಸಾಂಪ್ರದಾಯಿಕವಾಗಿ ಹತ್ತಿರ 60 ಸಾವಿರ ಮತಗಳು ಬರುತ್ತಿದ್ದವು. ಈಗ ಅದು 87 ಸಾವಿರಕ್ಕೆ ಮುಟ್ಟಿದೆ. ದೇವೇಗೌಡರು ಈ ಹಿಂದೆ ಅಲ್ಪಸಂಖ್ಯಾತ ಸಮುದಾಯದ ಪರ ಮೀಸಲಾತಿ, ಇನ್ನಿತರ ವಿಚಾರದ ಬಗ್ಗೆಯೂ ತೀರ್ಮಾನ ಮಾಡಿದ್ದರು. ಆದರೆ ಅವರಿಗೆ ನಮ್ಮ ಅವಶ್ಯಕತೆಯಿಲ್ಲ ಎಂಬುದು ಈ ಚುನಾವಣೆಯಿಂದ ಸ್ಪಷ್ಟವಾಗಿದೆ. ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದರು.

ಇನ್ನು ದೇವೇಗೌಡರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಯೋಗೇಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಿಲ್ಲ. ದೇಶ ಹಾಗೂ ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಎಂದು ಅನೇಕ ವೇಳೆ ಪ್ರಧಾನಿಯವರೇ ಹೇಳಿದ್ದಾರೆ. ಅಧಿಕಾರದ ದಾಹಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡುತ್ತಿಲ್ಲ ಎಂದು ಸಿಪಿವೈಗೆ ತಿರುಗೇಟು ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

1 hour ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

2 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

3 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

3 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

7 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

7 hours ago