ಭದ್ರಾವತಿ: ರಾಮನಗರದಲ್ಲಿ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತೀರಿ, ನಿಜವಾಗಿಯೂ ಧಮ್ಮು ಮತ್ತು ತಾಕತ್ತು ಇದ್ದರೆ ಶಾಸಕ ಬಿ.ಕೆ.ಸಂಗಮೇಶ್ ಅವರ ಮಗನ ಮೇಲೆ ಎಫ್ಐಆರ್ ದಾಖಲಿಸಬೇಕು. ಅಲ್ಲಿಯರೆಗೂ ಈ ಪ್ರತಿಭಟನೆ ಮುಂದುವರೆಯಲಿದ್ದು ಮುಕ್ತಾಯವಲ್ಲ, ಹೊಸ ಅಧ್ಯಾಯ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣದ ವಿರುದ್ಧ ಇಂದು(ಫೆಬ್ರವರಿ.15) ಭದ್ರಾವತಿ ಜೆಡಿಎಸ್ ತಾಲ್ಲೂಕು ಘಟಕ ಹಾಗೂ ಬಿಜೆಪಿ ಘಟಕ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಮನಗರದಲ್ಲಿ ಧಮ್ಮು ಮತ್ತು ತಾಕತ್ತು ಬಗ್ಗೆ ಮಾತನಾಡುತ್ತೀರಿ ಅಲ್ಲವೇ ಈ ಪ್ರಕರಣದ ಬಗ್ಗೆಯೂ ಎಫ್ಐಆರ್ ಹಾಕಿ, ಶಾಸಕರ ಮಗನ ಧ್ವನಿಯನ್ನು ಎಫ್ಎಸ್ಎಲ್ ಪರೀಕ್ಷೆ ಮಾಡಿಸಿ ತನಿಖೆ ನಡೆಸಬೇಕು. ಈ ಪ್ರತಿಭಟನೆ ಇಲ್ಲಿಗೆ ಮುಕ್ತಾಯ ಆಗಲ್ಲ, ಇಲ್ಲಿಂದ ಹೊಸ ಅಧ್ಯಾಯ ಶುರುವಾಗಲಿದೆ. ಭದ್ರಾವತಿಯ ನಾಗರೀಕರು ಜಾಗೃತರಾಗಿರಬೇಕು ನಿಮ್ಮ ಜೊತೆ ನಾವಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಶಾಸಕರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ ಭದ್ರಾವತಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕರ ದೌರ್ಜನ್ಯ ಬಹಳ ದಿನ ನಡೆಯಲ್ಲ. ಅಭಿವೃದ್ಧಿಗೆ ಮೀಸಲಿಡಬೇಕಾದ ಸಮಯವನ್ನು ಇಸ್ಪೀಟ್ ದಂಧೆ ಮತ್ತು ಮಾದಕ ವಸ್ತುಗಳ ಪೂರೈಕೆಗೆ ಶಾಸಕರು ಸಮಯ ಮೀಸಲಿಟ್ಟಿದ್ದಾರೆ ಎಂದು ಶಾಸಕ ಸಂಗಮೇಶ್ ವಿರುದ್ಧ ಕಿಡಿಕಾರಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಎರಡೂ ಸಲ ಮುಖ್ಯಮಂತ್ರಿಯಾಗಿದ್ದರೂ ಕೂಡ ಇದುವರೆಗೂ ಅಧಿಕಾರಿಗಳಿಗೆ ಒಂದು ಕೆಲಸವನ್ನು ಮಾಡಿ ಎಂದು ನಾನು ಫೋನ್ ಕರೆ ಮಾಡಿಲ್ಲ. ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಳ್ಳಬೇಕು. ನಾನು ಪೊಲೀಸ್ ಅವರಿಗೆ ಕೈ ಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಇಡೀ ರಾಜ್ಯಾದ್ಯಂತ ಶಾಸಕರ ದುರಂಹಕಾರ ಗೊತ್ತಾಗಿದೆ. ರಾಜ್ಯದ ಜನತೆಗೆ ಮಾಧ್ಯಮದವರು ವಾಸ್ತವ ತಿಳಿಸಿದ್ದಾರೆ. ಅಪ್ಪಾಜಿ ಗೌಡರನ್ನ ನಾವು ನೆನಪಿಸಿಕೊಳ್ಳಬೇಕು ಆಸ್ತಿ ಮಾಡದೆ ಜನರ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಂಡು ತನಿಖೆ ನಡೆಸಿ ಎಂದು ಒತ್ತಾಯಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…