ರಾಜ್ಯ

ಭದ್ರಾವತಿ ಪ್ರತಿಭಟನೆ ಮುಕ್ತಾಯವಲ್ಲ, ಹೊಸ ಅಧ್ಯಾಯ: ನಿಖಿಲ್‌ ಕುಮಾರಸ್ವಾಮಿ

ಭದ್ರಾವತಿ: ರಾಮನಗರದಲ್ಲಿ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತೀರಿ, ನಿಜವಾಗಿಯೂ ಧಮ್ಮು ಮತ್ತು ತಾಕತ್ತು ಇದ್ದರೆ ಶಾಸಕ ಬಿ.ಕೆ.ಸಂಗಮೇಶ್‌ ಅವರ ಮಗನ ಮೇಲೆ ಎಫ್‌ಐಆರ್‌ ದಾಖಲಿಸಬೇಕು. ಅಲ್ಲಿಯರೆಗೂ ಈ ಪ್ರತಿಭಟನೆ ಮುಂದುವರೆಯಲಿದ್ದು ಮುಕ್ತಾಯವಲ್ಲ, ಹೊಸ ಅಧ್ಯಾಯ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣದ ವಿರುದ್ಧ ಇಂದು(ಫೆಬ್ರವರಿ.15) ಭದ್ರಾವತಿ ಜೆಡಿಎಸ್‌ ತಾಲ್ಲೂಕು ಘಟಕ ಹಾಗೂ ಬಿಜೆಪಿ ಘಟಕ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಮನಗರದಲ್ಲಿ ಧಮ್ಮು ಮತ್ತು ತಾಕತ್ತು ಬಗ್ಗೆ ಮಾತನಾಡುತ್ತೀರಿ ಅಲ್ಲವೇ ಈ ಪ್ರಕರಣದ ಬಗ್ಗೆಯೂ ಎಫ್‌ಐಆರ್‌ ಹಾಕಿ, ಶಾಸಕರ ಮಗನ ಧ್ವನಿಯನ್ನು ಎಫ್‌ಎಸ್‌ಎಲ್‌ ಪರೀಕ್ಷೆ ಮಾಡಿಸಿ ತನಿಖೆ ನಡೆಸಬೇಕು. ಈ ಪ್ರತಿಭಟನೆ ಇಲ್ಲಿಗೆ ಮುಕ್ತಾಯ ಆಗಲ್ಲ, ಇಲ್ಲಿಂದ ಹೊಸ ಅಧ್ಯಾಯ ಶುರುವಾಗಲಿದೆ. ಭದ್ರಾವತಿಯ ನಾಗರೀಕರು ಜಾಗೃತರಾಗಿರಬೇಕು ನಿಮ್ಮ ಜೊತೆ ನಾವಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಶಾಸಕರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ ಭದ್ರಾವತಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕರ ದೌರ್ಜನ್ಯ ಬಹಳ ದಿನ ನಡೆಯಲ್ಲ. ಅಭಿವೃದ್ಧಿಗೆ ಮೀಸಲಿಡಬೇಕಾದ ಸಮಯವನ್ನು ಇಸ್ಪೀಟ್ ದಂಧೆ ಮತ್ತು ಮಾದಕ ವಸ್ತುಗಳ ಪೂರೈಕೆಗೆ ಶಾಸಕರು ಸಮಯ ಮೀಸಲಿಟ್ಟಿದ್ದಾರೆ ಎಂದು ಶಾಸಕ ಸಂಗಮೇಶ್ ವಿರುದ್ಧ ಕಿಡಿಕಾರಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಎರಡೂ ಸಲ ಮುಖ್ಯಮಂತ್ರಿಯಾಗಿದ್ದರೂ ಕೂಡ ಇದುವರೆಗೂ ಅಧಿಕಾರಿಗಳಿಗೆ ಒಂದು ಕೆಲಸವನ್ನು ಮಾಡಿ ಎಂದು ನಾನು ಫೋನ್‌ ಕರೆ ಮಾಡಿಲ್ಲ. ಪೊಲೀಸ್‌ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಳ್ಳಬೇಕು. ನಾನು ಪೊಲೀಸ್‌ ಅವರಿಗೆ ಕೈ ಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಇಡೀ ರಾಜ್ಯಾದ್ಯಂತ ಶಾಸಕರ ದುರಂಹಕಾರ ಗೊತ್ತಾಗಿದೆ. ರಾಜ್ಯದ ಜನತೆಗೆ ಮಾಧ್ಯಮದವರು ವಾಸ್ತವ ತಿಳಿಸಿದ್ದಾರೆ. ಅಪ್ಪಾಜಿ ಗೌಡರನ್ನ ನಾವು ನೆನಪಿಸಿಕೊಳ್ಳಬೇಕು ಆಸ್ತಿ ಮಾಡದೆ ಜನರ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಹೀಗಾಗಿ ಪೊಲೀಸ್‌ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಂಡು ತನಿಖೆ ನಡೆಸಿ ಎಂದು ಒತ್ತಾಯಿಸಿದರು.

ಅರ್ಚನ ಎಸ್‌ ಎಸ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

5 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

5 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago