ಭದ್ರಾವತಿ: ರಾಮನಗರದಲ್ಲಿ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತೀರಿ, ನಿಜವಾಗಿಯೂ ಧಮ್ಮು ಮತ್ತು ತಾಕತ್ತು ಇದ್ದರೆ ಶಾಸಕ ಬಿ.ಕೆ.ಸಂಗಮೇಶ್ ಅವರ ಮಗನ ಮೇಲೆ ಎಫ್ಐಆರ್ ದಾಖಲಿಸಬೇಕು. ಅಲ್ಲಿಯರೆಗೂ ಈ ಪ್ರತಿಭಟನೆ ಮುಂದುವರೆಯಲಿದ್ದು ಮುಕ್ತಾಯವಲ್ಲ, ಹೊಸ ಅಧ್ಯಾಯ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣದ ವಿರುದ್ಧ ಇಂದು(ಫೆಬ್ರವರಿ.15) ಭದ್ರಾವತಿ ಜೆಡಿಎಸ್ ತಾಲ್ಲೂಕು ಘಟಕ ಹಾಗೂ ಬಿಜೆಪಿ ಘಟಕ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಮನಗರದಲ್ಲಿ ಧಮ್ಮು ಮತ್ತು ತಾಕತ್ತು ಬಗ್ಗೆ ಮಾತನಾಡುತ್ತೀರಿ ಅಲ್ಲವೇ ಈ ಪ್ರಕರಣದ ಬಗ್ಗೆಯೂ ಎಫ್ಐಆರ್ ಹಾಕಿ, ಶಾಸಕರ ಮಗನ ಧ್ವನಿಯನ್ನು ಎಫ್ಎಸ್ಎಲ್ ಪರೀಕ್ಷೆ ಮಾಡಿಸಿ ತನಿಖೆ ನಡೆಸಬೇಕು. ಈ ಪ್ರತಿಭಟನೆ ಇಲ್ಲಿಗೆ ಮುಕ್ತಾಯ ಆಗಲ್ಲ, ಇಲ್ಲಿಂದ ಹೊಸ ಅಧ್ಯಾಯ ಶುರುವಾಗಲಿದೆ. ಭದ್ರಾವತಿಯ ನಾಗರೀಕರು ಜಾಗೃತರಾಗಿರಬೇಕು ನಿಮ್ಮ ಜೊತೆ ನಾವಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಶಾಸಕರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ ಭದ್ರಾವತಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕರ ದೌರ್ಜನ್ಯ ಬಹಳ ದಿನ ನಡೆಯಲ್ಲ. ಅಭಿವೃದ್ಧಿಗೆ ಮೀಸಲಿಡಬೇಕಾದ ಸಮಯವನ್ನು ಇಸ್ಪೀಟ್ ದಂಧೆ ಮತ್ತು ಮಾದಕ ವಸ್ತುಗಳ ಪೂರೈಕೆಗೆ ಶಾಸಕರು ಸಮಯ ಮೀಸಲಿಟ್ಟಿದ್ದಾರೆ ಎಂದು ಶಾಸಕ ಸಂಗಮೇಶ್ ವಿರುದ್ಧ ಕಿಡಿಕಾರಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಎರಡೂ ಸಲ ಮುಖ್ಯಮಂತ್ರಿಯಾಗಿದ್ದರೂ ಕೂಡ ಇದುವರೆಗೂ ಅಧಿಕಾರಿಗಳಿಗೆ ಒಂದು ಕೆಲಸವನ್ನು ಮಾಡಿ ಎಂದು ನಾನು ಫೋನ್ ಕರೆ ಮಾಡಿಲ್ಲ. ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಳ್ಳಬೇಕು. ನಾನು ಪೊಲೀಸ್ ಅವರಿಗೆ ಕೈ ಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಇಡೀ ರಾಜ್ಯಾದ್ಯಂತ ಶಾಸಕರ ದುರಂಹಕಾರ ಗೊತ್ತಾಗಿದೆ. ರಾಜ್ಯದ ಜನತೆಗೆ ಮಾಧ್ಯಮದವರು ವಾಸ್ತವ ತಿಳಿಸಿದ್ದಾರೆ. ಅಪ್ಪಾಜಿ ಗೌಡರನ್ನ ನಾವು ನೆನಪಿಸಿಕೊಳ್ಳಬೇಕು ಆಸ್ತಿ ಮಾಡದೆ ಜನರ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಂಡು ತನಿಖೆ ನಡೆಸಿ ಎಂದು ಒತ್ತಾಯಿಸಿದರು.
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…