ಭದ್ರಾವತಿ: ರಾಮನಗರದಲ್ಲಿ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತೀರಿ, ನಿಜವಾಗಿಯೂ ಧಮ್ಮು ಮತ್ತು ತಾಕತ್ತು ಇದ್ದರೆ ಶಾಸಕ ಬಿ.ಕೆ.ಸಂಗಮೇಶ್ ಅವರ ಮಗನ ಮೇಲೆ ಎಫ್ಐಆರ್ ದಾಖಲಿಸಬೇಕು. ಅಲ್ಲಿಯರೆಗೂ ಈ ಪ್ರತಿಭಟನೆ ಮುಂದುವರೆಯಲಿದ್ದು ಮುಕ್ತಾಯವಲ್ಲ, ಹೊಸ ಅಧ್ಯಾಯ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣದ ವಿರುದ್ಧ ಇಂದು(ಫೆಬ್ರವರಿ.15) ಭದ್ರಾವತಿ ಜೆಡಿಎಸ್ ತಾಲ್ಲೂಕು ಘಟಕ ಹಾಗೂ ಬಿಜೆಪಿ ಘಟಕ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಮನಗರದಲ್ಲಿ ಧಮ್ಮು ಮತ್ತು ತಾಕತ್ತು ಬಗ್ಗೆ ಮಾತನಾಡುತ್ತೀರಿ ಅಲ್ಲವೇ ಈ ಪ್ರಕರಣದ ಬಗ್ಗೆಯೂ ಎಫ್ಐಆರ್ ಹಾಕಿ, ಶಾಸಕರ ಮಗನ ಧ್ವನಿಯನ್ನು ಎಫ್ಎಸ್ಎಲ್ ಪರೀಕ್ಷೆ ಮಾಡಿಸಿ ತನಿಖೆ ನಡೆಸಬೇಕು. ಈ ಪ್ರತಿಭಟನೆ ಇಲ್ಲಿಗೆ ಮುಕ್ತಾಯ ಆಗಲ್ಲ, ಇಲ್ಲಿಂದ ಹೊಸ ಅಧ್ಯಾಯ ಶುರುವಾಗಲಿದೆ. ಭದ್ರಾವತಿಯ ನಾಗರೀಕರು ಜಾಗೃತರಾಗಿರಬೇಕು ನಿಮ್ಮ ಜೊತೆ ನಾವಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಶಾಸಕರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ ಭದ್ರಾವತಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕರ ದೌರ್ಜನ್ಯ ಬಹಳ ದಿನ ನಡೆಯಲ್ಲ. ಅಭಿವೃದ್ಧಿಗೆ ಮೀಸಲಿಡಬೇಕಾದ ಸಮಯವನ್ನು ಇಸ್ಪೀಟ್ ದಂಧೆ ಮತ್ತು ಮಾದಕ ವಸ್ತುಗಳ ಪೂರೈಕೆಗೆ ಶಾಸಕರು ಸಮಯ ಮೀಸಲಿಟ್ಟಿದ್ದಾರೆ ಎಂದು ಶಾಸಕ ಸಂಗಮೇಶ್ ವಿರುದ್ಧ ಕಿಡಿಕಾರಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಎರಡೂ ಸಲ ಮುಖ್ಯಮಂತ್ರಿಯಾಗಿದ್ದರೂ ಕೂಡ ಇದುವರೆಗೂ ಅಧಿಕಾರಿಗಳಿಗೆ ಒಂದು ಕೆಲಸವನ್ನು ಮಾಡಿ ಎಂದು ನಾನು ಫೋನ್ ಕರೆ ಮಾಡಿಲ್ಲ. ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಳ್ಳಬೇಕು. ನಾನು ಪೊಲೀಸ್ ಅವರಿಗೆ ಕೈ ಮುಗಿದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಇಡೀ ರಾಜ್ಯಾದ್ಯಂತ ಶಾಸಕರ ದುರಂಹಕಾರ ಗೊತ್ತಾಗಿದೆ. ರಾಜ್ಯದ ಜನತೆಗೆ ಮಾಧ್ಯಮದವರು ವಾಸ್ತವ ತಿಳಿಸಿದ್ದಾರೆ. ಅಪ್ಪಾಜಿ ಗೌಡರನ್ನ ನಾವು ನೆನಪಿಸಿಕೊಳ್ಳಬೇಕು ಆಸ್ತಿ ಮಾಡದೆ ಜನರ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಪಾರದರ್ಶಕವಾಗಿ ನಡೆದುಕೊಂಡು ತನಿಖೆ ನಡೆಸಿ ಎಂದು ಒತ್ತಾಯಿಸಿದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…