ರಾಜ್ಯ

ನಿಖಿಲ್‌ ಕುಮಾರಸ್ವಾಮಿ ನಾಳೆಯಿಂದ ರಾಜ್ಯ ಪ್ರವಾಸ : ಪಕ್ಷ ಸಂಘಟನೆಗೆ ಒತ್ತು

ಬೆಂಗಳೂರು : ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಜನತಾದಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಇಂದಿನಿಂದ ಅಧಿಕೃತವಾಗಿ ಮಿಸ್ಡ್ ಕಾಲ್ ಅಭಿಯಾನದ ಮೂಲಕ ಸದಸ್ಯತ್ವ ನೋಂದಣಿ ಆರಂಭ ಮಾಡಿದ್ದೇವೆ. ರಾಜ್ಯ ಪ್ರವಾಸದ ವೇಳೆ ಪ್ರತಿ ಕಾರ್ಯಕರ್ತರನ್ನು ಭೇಟಿ ಮಾಡಿ. ಪಕ್ಷಕ್ಕಾಗಿ ದುಡಿಯುವ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.

ಕನಿಷ್ಠ ಐವತ್ತು ಲಕ್ಷ ಜನ ಸದಸ್ಯರಾಗಬೇಕು ಎಂಬ ಗುರಿ ಇಟ್ಟುಕೊಂಡು ಹೋಗೋಣ. ಮತ್ತೆ ಈ ಪಕ್ಷವನ್ನು ತಳ ಮಟ್ಟದಿಂದ ಪುಟಿದೇಳುವಂತೆ ಮಾಡಬೇಕು ಎಂಬ ನಿಟ್ಟಿನಲ್ಲಿ ಆ.16 ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದರು.

ಚಿತ್ರರಂಗದಲ್ಲಿ ಅಣ್ಣಾವ್ರು, ರಾಜಕಾರಣದಲ್ಲಿ ಕುಮಾರಣ್ಣ
ಚಿತ್ರರಂಗದಲ್ಲಿ ಡಾ ರಾಜ್ ಕುಮಾರಣ್ಣ ಅವರಿಗೆ ಅಣ್ಣ ಅಂತ ಸ್ಥಾನ ಕೊಟ್ಟಿದ್ದರು. ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗೆ ಜನರು ಸ್ಥಾನ‌ ನೀಡಿದ್ದಾರೆ. ಅಪ್ಪಂದಿರ ದಿನಚರಣೆ ಆಚರಿಸೋಕ್ಕೆ ನನಗೆ ಒಳ್ಳೆ ಅವಕಾಶ ತಂದೆ ಅಂದ್ರೆ ನಮ್ಮ‌ ಜೀವನದ ಬೆಳಕು. ನಾನು ನಮ್ಮ‌ ತಂದೆಯಿಂದ ಹಲವು ವಿಚಾರಗಳನ್ನು ಹಾಗೆಯೇ ದೇವೇಗೌಡರ ರಾಜಕೀಯ ಕಾರ್ಯ ಕೆಲಸ ಕಲಿತಿದ್ದೇನೆ ಎಂದು ತಿಳಿಸಿದರು.

ಒಬ್ಬ ರೈತನ ಮಗ ದೇಶದ ಉನ್ನತ ಹುದ್ದೆ ಅಲಂಕರಿಸಿದರು ದೇವೇಗೌಡರನ್ನ ಈಶ್ವರನ ಪುತ್ರ ಎಂದೇ ಹೇಳಬಹುದು. ರಾಜ್ಯದ ಬಗ್ಗೆ ಅವರಿಗೆ ಇದ್ದ ಬದ್ದತೆ ನೋಡಿದ್ರೆ ಹಲವು ಜನರಿಗೆ ಮಾರ್ಗದರ್ಶನ ಆಗುವಂತದ್ದು ಎಂದರು. ನನ್ನ ಒಳಗೆ ಆತಂಕವಿದೆ ಎಲ್ಲರೂ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಾನು ಪಕ್ಷದ ಸಂಘಟನೆಗೆ ಮೊದಲು ಹಾಜರಾತಿ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾವೇಶಕ್ಕೂ ಮೊದಲು ಆದಿಚುಂಚನಗಿರಿ ಬುದ್ದಿಗಳ ಜೊತೆ ಕೂತಿದ್ದೆ. ಅವರು ಅನೇಕ ಪ್ರಸ್ತಾವಿಕ ನುಡಿ ಹೇಳುತ್ತಿದ್ರು. ಹೀಗಾಗಿ ಮಧ್ಯೆ ಎದ್ದು ಬರಲು ಆಗಲಿಲ್ಲ. ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಮುಂದೆ ಈ ರೀತಿ ಆಗಲಿಲ್ಲ. ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಪಕ್ಷಕ್ಕೆ ಹೊಸ ಯುಗ ಆರಂಭವಾಗಬೇಕು ಎಂದರು.

58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ
ನಾಳೆಯಿಂದ ಬಹುತೇಕ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡುತ್ತೇನೆ. ಇವತ್ತು ಬಹಳ ಉತ್ಸಾಹದಿಂದ ಪಕ್ಷ ಕಟ್ಟೋಕ್ಕೆ‌ ಎಲ್ಲರು ಬಂದಿದ್ದಾರೆ. 58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ. ನಾನು ನಿಮ್ಮ ಜೊತೆ ಇರುತ್ತೇನೆ. ಒಂದು ಕಡೆ ಪಕ್ಷ ಸಂಘಟನೆ ಆದರೆ ಮತ್ತೊಂದು ಕಡೆ ಸರ್ಕಾರದ ವೈಫಲ್ಯ ತೆರದಿಡಲು ಬರುತ್ತಿದ್ದೇನೆ ಎಂದರು.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಕಡೆಯೂ ಪ್ರವಾಸ ಮಾಡ್ತೇವೆ. ಕಾರ್ಯಕರ್ತರು ಒಂದು ಛಲ ಇಟ್ಟುಕೊಳ್ಳಬೇಕು.ನಮ್ಮದು ಸಣ್ಣ ಪ್ರಮಾಣದ ಪಕ್ಷ ಅಲ್ಲ. ಹಳ್ಳಿ ಹಳ್ಳಿಗಳಿಗೆ ಹೋಗಿ ಒಂದು ರಿಜಿಸ್ಟರ್ ಮಾಡಿ ಯಾವುದೇ ಹಣ ಕಾಸು ಖರ್ಚಾಗಲ್ಲ ಎಲ್ಲರ ಬಳಿ ಸ್ಮಾರ್ಟ್ ಪೋನ್ ಇದೆ. ಡಿಜಿಟಲ್ ನಲ್ಲಿ ರಿಜಿಸ್ಟರ್ ಮಾಡಿಸಿ ಪಕ್ಷದ ಸಂಘಟನೆಯಲ್ಲಿ ಕೈ ಜೋಡಿಸಿ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

10 mins ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

20 mins ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

30 mins ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

60 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

1 hour ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

2 hours ago