ರಾಜ್ಯ

ಎಚ್‌ಡಿಕೆ ಕೇಂದ್ರ ಸಚಿವರಾದ ಬೆನ್ನಲ್ಲೇ ಜೆಡಿಎಸ್‌ ರಾಜ್ಯಾಧ್ಯಕ್ಷ ಪಟ್ಟಕ್ಕೆ ನಿಖಿಲ್‌ ಕುಮಾರಸ್ವಾಮಿ ಸಜ್ಜು.?

ಬೆಂಗಳೂರು: ಕೇಂದ್ರ ಸಚಿವರಾಗಿ ಕಾರ್ಯಭಾರ ವಹಿಸಿಕೊಂಡಿರುವ ಹಾಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೆಗಲ ಮೇಲಿರುವ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಲು ಪುತ್ರ ನಿಖಿಲ್‌ ಕುಮಾರಸ್ವಾಮಿ ಸಜ್ಜಾಗುತ್ತಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಅಥವಾ ನಂತರ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸುವ ನಿರೀಕ್ಷೆಯಿದ್ದು, ಆ ಸ್ಥಾನಕ್ಕೆ ನಿಖಿಲ್‌ ಈಗಿನಿಂದಲೇ ನಾಯಕತ್ವದ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಕುಟುಂಬ ರಾಜಕಾರಣದ ಟೀಕೆ ಕೇಳಿಬರಬಹುದು ಎಂಬ ಕಾರಣಕ್ಕಾಗಿ ಹಿಂದೇಟು ಹಾಕಿದಲಿ ನಿಖಿಲ್‌ ಅವರ ಬದಲು ಬೇರೊಬ್ಬರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬಹುದು. ಆದರೂ ನಿಖಿಲ್‌ಗೆ ಕಾರ್ಯಾಧ್ಯಕ್ಷ ಅಥವಾ ಪ್ರಧಾನ ಕಾರ್ಯದರ್ಶಿಯಂತಹ ಮಹತ್ವದ ಹುದ್ದೆ ನೀಡುವ ಬಗ್ಗೆ ಚರ್ಚೆ ಆರಂಭವಾಗಿದೆ.

ಕುಮಾರಸ್ವಾಮಿ ಅವರ ಸಹೋದರ ಎಚ್.ಡಿ.ರೇವಣ್ಣ ಅವರ ಕುಟುಂಬ ಈಗ ಆರೋಪಗಳ ಸುಳಿಯಲ್ಲಿ ಸಿಲುಕಿ ಇಬ್ಬರೂ ಪುತ್ರರು ಜೈಲುಪಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯೇ ಮುಂದೆ ಪಕ್ಷವನ್ನು ನಿಭಾಯಿಸಲಿ ಎಂಬ ಅಭಿಪ್ರಾಯ ಸಹಜವಾಗಿಯೇ ಪಕ್ಷದ ಕಾರ್ಯಕರ್ತರಲ್ಲಿ ಮೂಡುತ್ತಿದೆ.

ಕಳೆದ ಲೋಕಸಭಾ ಚುನಾವಣೆಗೂ ಮೊದಲೇ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖ ಚಟುವಟಿಕೆಗಳಲ್ಲಿ ಪುತ್ರ ನಿಖಿಲ್‌ರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಶುರು ಮಾಡಿದರು. ಪಕ್ಷದ ಪ್ರತಿಯೊಂದು ಸಭೆ, ಮಹತ್ವದ ಮಾತುಕತೆಗಳಲ್ಲಿ ಇತರ ಮುಖಂಡರ ಬದಲು ನಿಖಿಲ್‌ ಅವರನ್ನೇ ಕರೆದೊಯ್ಯುತ್ತಿದ್ದರು.

ಎಲ್ಲೇ ಸಭೆ ನಡೆದರೂ ನಿಖಿಲ್‌ ಉಪಸ್ಥಿತಿ ಕಡ್ಡಾಯ ಎಂಬಂತಾಗಿತ್ತು. ತಂದೆ ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತಾ ಸಭೆಗಳನ್ನು ನಿಖಿಲ್‌ ನಡೆಸಿದ್ದರು. ಹೀಗಾಗಿ ಅವರೇ ಮುಂದಿನ ರಾಜ್ಯಾಧ್ಯಕ್ಷರಾಗಲು ಸೂಕ್ತ ಎಂಬ ನಿಲುವು ಪಕ್ಷದಲ್ಲಿ ಕಂಡು ಬಂದಿತು. ಚುನಾವಣೆ ಬಳಿಕವೂ ನಿಖಿಲ್‌ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿದ್ದು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಲು 35 ರಾಷ್ಟ್ರಗಳ ಜೊತೆ ಸಭೆ : ಬ್ರಿಟನ್

ಲಂಡನ್‌ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ…

31 mins ago

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…

1 hour ago

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

2 hours ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

2 hours ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

4 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

4 hours ago