ರಾಜ್ಯ

ಎಚ್‌ಡಿಕೆ ಕೇಂದ್ರ ಸಚಿವರಾದ ಬೆನ್ನಲ್ಲೇ ಜೆಡಿಎಸ್‌ ರಾಜ್ಯಾಧ್ಯಕ್ಷ ಪಟ್ಟಕ್ಕೆ ನಿಖಿಲ್‌ ಕುಮಾರಸ್ವಾಮಿ ಸಜ್ಜು.?

ಬೆಂಗಳೂರು: ಕೇಂದ್ರ ಸಚಿವರಾಗಿ ಕಾರ್ಯಭಾರ ವಹಿಸಿಕೊಂಡಿರುವ ಹಾಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೆಗಲ ಮೇಲಿರುವ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಲು ಪುತ್ರ ನಿಖಿಲ್‌ ಕುಮಾರಸ್ವಾಮಿ ಸಜ್ಜಾಗುತ್ತಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಅಥವಾ ನಂತರ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸುವ ನಿರೀಕ್ಷೆಯಿದ್ದು, ಆ ಸ್ಥಾನಕ್ಕೆ ನಿಖಿಲ್‌ ಈಗಿನಿಂದಲೇ ನಾಯಕತ್ವದ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಕುಟುಂಬ ರಾಜಕಾರಣದ ಟೀಕೆ ಕೇಳಿಬರಬಹುದು ಎಂಬ ಕಾರಣಕ್ಕಾಗಿ ಹಿಂದೇಟು ಹಾಕಿದಲಿ ನಿಖಿಲ್‌ ಅವರ ಬದಲು ಬೇರೊಬ್ಬರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬಹುದು. ಆದರೂ ನಿಖಿಲ್‌ಗೆ ಕಾರ್ಯಾಧ್ಯಕ್ಷ ಅಥವಾ ಪ್ರಧಾನ ಕಾರ್ಯದರ್ಶಿಯಂತಹ ಮಹತ್ವದ ಹುದ್ದೆ ನೀಡುವ ಬಗ್ಗೆ ಚರ್ಚೆ ಆರಂಭವಾಗಿದೆ.

ಕುಮಾರಸ್ವಾಮಿ ಅವರ ಸಹೋದರ ಎಚ್.ಡಿ.ರೇವಣ್ಣ ಅವರ ಕುಟುಂಬ ಈಗ ಆರೋಪಗಳ ಸುಳಿಯಲ್ಲಿ ಸಿಲುಕಿ ಇಬ್ಬರೂ ಪುತ್ರರು ಜೈಲುಪಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯೇ ಮುಂದೆ ಪಕ್ಷವನ್ನು ನಿಭಾಯಿಸಲಿ ಎಂಬ ಅಭಿಪ್ರಾಯ ಸಹಜವಾಗಿಯೇ ಪಕ್ಷದ ಕಾರ್ಯಕರ್ತರಲ್ಲಿ ಮೂಡುತ್ತಿದೆ.

ಕಳೆದ ಲೋಕಸಭಾ ಚುನಾವಣೆಗೂ ಮೊದಲೇ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖ ಚಟುವಟಿಕೆಗಳಲ್ಲಿ ಪುತ್ರ ನಿಖಿಲ್‌ರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಶುರು ಮಾಡಿದರು. ಪಕ್ಷದ ಪ್ರತಿಯೊಂದು ಸಭೆ, ಮಹತ್ವದ ಮಾತುಕತೆಗಳಲ್ಲಿ ಇತರ ಮುಖಂಡರ ಬದಲು ನಿಖಿಲ್‌ ಅವರನ್ನೇ ಕರೆದೊಯ್ಯುತ್ತಿದ್ದರು.

ಎಲ್ಲೇ ಸಭೆ ನಡೆದರೂ ನಿಖಿಲ್‌ ಉಪಸ್ಥಿತಿ ಕಡ್ಡಾಯ ಎಂಬಂತಾಗಿತ್ತು. ತಂದೆ ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತಾ ಸಭೆಗಳನ್ನು ನಿಖಿಲ್‌ ನಡೆಸಿದ್ದರು. ಹೀಗಾಗಿ ಅವರೇ ಮುಂದಿನ ರಾಜ್ಯಾಧ್ಯಕ್ಷರಾಗಲು ಸೂಕ್ತ ಎಂಬ ನಿಲುವು ಪಕ್ಷದಲ್ಲಿ ಕಂಡು ಬಂದಿತು. ಚುನಾವಣೆ ಬಳಿಕವೂ ನಿಖಿಲ್‌ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿದ್ದು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago