ಬೆಂಗಳೂರು: ಕೇಂದ್ರ ಸಚಿವರಾಗಿ ಕಾರ್ಯಭಾರ ವಹಿಸಿಕೊಂಡಿರುವ ಹಾಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೆಗಲ ಮೇಲಿರುವ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಲು ಪುತ್ರ ನಿಖಿಲ್ ಕುಮಾರಸ್ವಾಮಿ ಸಜ್ಜಾಗುತ್ತಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಅಥವಾ ನಂತರ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸುವ ನಿರೀಕ್ಷೆಯಿದ್ದು, ಆ ಸ್ಥಾನಕ್ಕೆ ನಿಖಿಲ್ ಈಗಿನಿಂದಲೇ ನಾಯಕತ್ವದ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಕುಟುಂಬ ರಾಜಕಾರಣದ ಟೀಕೆ ಕೇಳಿಬರಬಹುದು ಎಂಬ ಕಾರಣಕ್ಕಾಗಿ ಹಿಂದೇಟು ಹಾಕಿದಲಿ ನಿಖಿಲ್ ಅವರ ಬದಲು ಬೇರೊಬ್ಬರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬಹುದು. ಆದರೂ ನಿಖಿಲ್ಗೆ ಕಾರ್ಯಾಧ್ಯಕ್ಷ ಅಥವಾ ಪ್ರಧಾನ ಕಾರ್ಯದರ್ಶಿಯಂತಹ ಮಹತ್ವದ ಹುದ್ದೆ ನೀಡುವ ಬಗ್ಗೆ ಚರ್ಚೆ ಆರಂಭವಾಗಿದೆ.
ಕುಮಾರಸ್ವಾಮಿ ಅವರ ಸಹೋದರ ಎಚ್.ಡಿ.ರೇವಣ್ಣ ಅವರ ಕುಟುಂಬ ಈಗ ಆರೋಪಗಳ ಸುಳಿಯಲ್ಲಿ ಸಿಲುಕಿ ಇಬ್ಬರೂ ಪುತ್ರರು ಜೈಲುಪಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿಯೇ ಮುಂದೆ ಪಕ್ಷವನ್ನು ನಿಭಾಯಿಸಲಿ ಎಂಬ ಅಭಿಪ್ರಾಯ ಸಹಜವಾಗಿಯೇ ಪಕ್ಷದ ಕಾರ್ಯಕರ್ತರಲ್ಲಿ ಮೂಡುತ್ತಿದೆ.
ಕಳೆದ ಲೋಕಸಭಾ ಚುನಾವಣೆಗೂ ಮೊದಲೇ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖ ಚಟುವಟಿಕೆಗಳಲ್ಲಿ ಪುತ್ರ ನಿಖಿಲ್ರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಶುರು ಮಾಡಿದರು. ಪಕ್ಷದ ಪ್ರತಿಯೊಂದು ಸಭೆ, ಮಹತ್ವದ ಮಾತುಕತೆಗಳಲ್ಲಿ ಇತರ ಮುಖಂಡರ ಬದಲು ನಿಖಿಲ್ ಅವರನ್ನೇ ಕರೆದೊಯ್ಯುತ್ತಿದ್ದರು.
ಎಲ್ಲೇ ಸಭೆ ನಡೆದರೂ ನಿಖಿಲ್ ಉಪಸ್ಥಿತಿ ಕಡ್ಡಾಯ ಎಂಬಂತಾಗಿತ್ತು. ತಂದೆ ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ಲೋಕಸಭಾ ಚುನಾವಣೆಯ ಸಿದ್ಧತಾ ಸಭೆಗಳನ್ನು ನಿಖಿಲ್ ನಡೆಸಿದ್ದರು. ಹೀಗಾಗಿ ಅವರೇ ಮುಂದಿನ ರಾಜ್ಯಾಧ್ಯಕ್ಷರಾಗಲು ಸೂಕ್ತ ಎಂಬ ನಿಲುವು ಪಕ್ಷದಲ್ಲಿ ಕಂಡು ಬಂದಿತು. ಚುನಾವಣೆ ಬಳಿಕವೂ ನಿಖಿಲ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿದ್ದು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…