ರಾಜ್ಯ

ಹನಿಟ್ರ್ಯಾಪ್‌ ಕೇಸ್‌ ತನಿಖೆ ನಿಧಾನವಾಗುತ್ತಿದೆ, ಪಾರದರ್ಶಕವಾಗಿ ತನಿಖೆ ನಡೆಯಬೇಕು: ನಿಖಿಲ್‌ ಕುಮಾರ್‌ಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಹನಿಟ್ರ್ಯಾಪ್‌ ಕೇಸ್‌ ತನಿಖೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿದ್ದು, ಪಾರದರ್ಶಕವಾಗಿ ತನಿಖೆ ನಡೆಸಿ ರಾಜ್ಯ ಜನತೆಯ ಮುಂದೆ ವರದಿಯನ್ನಿಡಬೇಕು ಎಂದು ಸರ್ಕಾರಕ್ಕೆ  ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ನಗರದ ಜೆಡಿಎಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.1) ಹನಿಟ್ರ್ಯಾಪ್‌ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಭಾವಿ ಸಚಿವರಿಗೆ ಹನಿಟ್ರ‍್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಪಾರದರ್ಶಕವಾಗಿ ತನಿಖೆ ನಡೆಸಿ, ಸತ್ಯಾಸತ್ಯಾತೆಯ ಬಗ್ಗೆ ಜನತೆಯ ಮುಂದೆ ಅನಾವರಣಗೊಳಿಸಬೇಕು. ಆದರೆ ಸಚಿವರ ಸರ್ಕಾರವೇ ಅಧಿಕಾರದಲ್ಲಿದ್ದರೂ ತನಿಖೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ವಿರೋಧ ಪಕ್ಷದವರನ್ನು ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಿ ಕೆಲಸ ಮಾಡುತ್ತದೆ. ಆದರೆ ಹನಿಟ್ರ್ಯಾಪ್‌ ಕೇಸ್‌ನಲ್ಲಿ ಮಾತ್ರ ಯಾಕೆ ತನಿಖೆಯನ್ನು ನಿಧಾನ ಗತಿಯಲ್ಲಿ ನಡೆಸುತ್ತಿದೆ? ಇದೇ ಸರ್ಕಾರ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರ ಕೇಸ್‌ನಲ್ಲಿ ಅಷ್ಟೊಂದು ಆಸಕ್ತಿ ವಹಿಸಿ ಏನೇನೋ ಮಾಡಿದರು. ಅಷ್ಟೊಂದು ಹೈಡ್ರಾಮಾ ಮಾಡೋಕೆ ಅವರೇನೂ ಭಯೋತ್ಪಾದಕರಾ? ಒಬ್ಬ ಎಂಎಲ್‌ಸಿಯನ್ನು ಹಾಗೇ ನಡೆಸಿಕೊಂಡಿದ್ದು ಸರಿಯಲ್ಲ. ಸರ್ಕಾರವೂ ವಿಪಕ್ಷಗಳನ್ನು ಹಾಗೇ ನಡೆಸಿಕೊಂಡರೇ, ಸ್ವತಃ ಸಚಿವರೇ ಆರೋಪ ಮಾಡಿದರೂ ಯಾಕೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಎಂಎಲ್‌ಸಿ ಆರ್‌.ರಾಜೇಂದ್ರ ಅವರ ಕೊಲೆ ಯತ್ನದ ಸುಪಾರಿಯ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್‌ ಬಗ್ಗೆ ಆರೋಪ ಮಾಡಿದ್ದರು. ಇದೀಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಹಾಗಾಗಿ ಈ ಎಲ್ಲಾ ವಿಚಾರವನ್ನು ರಾಜ್ಯದ ಜನರಿಗೆ ಬಿಡುತ್ತೇನೆ. ಅವರೇ ಈ ವಿಚಾರಗಳ ಬಗ್ಗೆ ತೀರ್ಮಾನ ಮಾಡಲಿ ಎಂದರು.

ಇನ್ನು ಸಚಿವರು ಹನಿಟ್ರ್ಯಾಪ್‌ ವಿಚಾರದಲ್ಲಿ ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಇದೀಗ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ರಾಜ್ಯದ ಜನತೆಗೆ ಬಿಡುತ್ತೇನೆ. ಆದರೆ ಹನಿಟ್ರ್ಯಾಪ್‌ ವಿಚಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ವಿಧಾನಸೌಧದಲ್ಲಿ ಈ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ಸಂಗತಿಯಾಗಿದೆ. ಅಲ್ಲದೇ ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ಹೀಗಾಗಿ ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ, ಇದು ಸಮಾಜಕ್ಕೆ ಮಾರಕವಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

34 mins ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

45 mins ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

2 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

3 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

4 hours ago