ರಾಜ್ಯ

ಹನಿಟ್ರ್ಯಾಪ್‌ ಕೇಸ್‌ ತನಿಖೆ ನಿಧಾನವಾಗುತ್ತಿದೆ, ಪಾರದರ್ಶಕವಾಗಿ ತನಿಖೆ ನಡೆಯಬೇಕು: ನಿಖಿಲ್‌ ಕುಮಾರ್‌ಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಹನಿಟ್ರ್ಯಾಪ್‌ ಕೇಸ್‌ ತನಿಖೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿದ್ದು, ಪಾರದರ್ಶಕವಾಗಿ ತನಿಖೆ ನಡೆಸಿ ರಾಜ್ಯ ಜನತೆಯ ಮುಂದೆ ವರದಿಯನ್ನಿಡಬೇಕು ಎಂದು ಸರ್ಕಾರಕ್ಕೆ  ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ನಗರದ ಜೆಡಿಎಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.1) ಹನಿಟ್ರ್ಯಾಪ್‌ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಭಾವಿ ಸಚಿವರಿಗೆ ಹನಿಟ್ರ‍್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಪಾರದರ್ಶಕವಾಗಿ ತನಿಖೆ ನಡೆಸಿ, ಸತ್ಯಾಸತ್ಯಾತೆಯ ಬಗ್ಗೆ ಜನತೆಯ ಮುಂದೆ ಅನಾವರಣಗೊಳಿಸಬೇಕು. ಆದರೆ ಸಚಿವರ ಸರ್ಕಾರವೇ ಅಧಿಕಾರದಲ್ಲಿದ್ದರೂ ತನಿಖೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ವಿರೋಧ ಪಕ್ಷದವರನ್ನು ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಿ ಕೆಲಸ ಮಾಡುತ್ತದೆ. ಆದರೆ ಹನಿಟ್ರ್ಯಾಪ್‌ ಕೇಸ್‌ನಲ್ಲಿ ಮಾತ್ರ ಯಾಕೆ ತನಿಖೆಯನ್ನು ನಿಧಾನ ಗತಿಯಲ್ಲಿ ನಡೆಸುತ್ತಿದೆ? ಇದೇ ಸರ್ಕಾರ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರ ಕೇಸ್‌ನಲ್ಲಿ ಅಷ್ಟೊಂದು ಆಸಕ್ತಿ ವಹಿಸಿ ಏನೇನೋ ಮಾಡಿದರು. ಅಷ್ಟೊಂದು ಹೈಡ್ರಾಮಾ ಮಾಡೋಕೆ ಅವರೇನೂ ಭಯೋತ್ಪಾದಕರಾ? ಒಬ್ಬ ಎಂಎಲ್‌ಸಿಯನ್ನು ಹಾಗೇ ನಡೆಸಿಕೊಂಡಿದ್ದು ಸರಿಯಲ್ಲ. ಸರ್ಕಾರವೂ ವಿಪಕ್ಷಗಳನ್ನು ಹಾಗೇ ನಡೆಸಿಕೊಂಡರೇ, ಸ್ವತಃ ಸಚಿವರೇ ಆರೋಪ ಮಾಡಿದರೂ ಯಾಕೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಎಂಎಲ್‌ಸಿ ಆರ್‌.ರಾಜೇಂದ್ರ ಅವರ ಕೊಲೆ ಯತ್ನದ ಸುಪಾರಿಯ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್‌ ಬಗ್ಗೆ ಆರೋಪ ಮಾಡಿದ್ದರು. ಇದೀಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಹಾಗಾಗಿ ಈ ಎಲ್ಲಾ ವಿಚಾರವನ್ನು ರಾಜ್ಯದ ಜನರಿಗೆ ಬಿಡುತ್ತೇನೆ. ಅವರೇ ಈ ವಿಚಾರಗಳ ಬಗ್ಗೆ ತೀರ್ಮಾನ ಮಾಡಲಿ ಎಂದರು.

ಇನ್ನು ಸಚಿವರು ಹನಿಟ್ರ್ಯಾಪ್‌ ವಿಚಾರದಲ್ಲಿ ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಇದೀಗ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ರಾಜ್ಯದ ಜನತೆಗೆ ಬಿಡುತ್ತೇನೆ. ಆದರೆ ಹನಿಟ್ರ್ಯಾಪ್‌ ವಿಚಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ವಿಧಾನಸೌಧದಲ್ಲಿ ಈ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ಸಂಗತಿಯಾಗಿದೆ. ಅಲ್ಲದೇ ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ಹೀಗಾಗಿ ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ, ಇದು ಸಮಾಜಕ್ಕೆ ಮಾರಕವಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

23 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

25 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

27 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

28 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

33 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

38 mins ago