ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ನಲ್ಲಿ ಸ್ಯಾಂಡಲ್ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ್ದರು. ಆದರೆ ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಅವರಿಂದ ಆ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ. ಶಿವಕುಮಾರ್ ಅವರ ವಾರ್ನಿಂಗ್ಗೆ ಯಾರೂ ಹೆದರಿ ಕೂರೋದಿಲ್ಲ. ಡಿಕೆಶಿ ಹೇಳಿಕೆ ಕಲಾವಿದರು, ನಿರ್ಮಾಪಕ, ನಿರ್ದೇಶಕರು ಹಾಗೂ ತಂತ್ರಜ್ಞರ ಮನಸ್ಸಿಗೆ ನೋವು ಉಂಟು ಮಾಡಿದೆ. ಕಲಾವಿದರು ತುಂಬಾ ಸೂಕ್ಷ್ಮ ಸ್ವಭಾವದ ವ್ಯಕ್ತಿಗಳು. ಡಾ.ರಾಜ್ಕುಮಾರ್ ಹೋರಾಟ ಮಾಡಿದಾಗ ಇಡೀ ಚಿತ್ರರಂಗ ಭಾಗಿಯಾಗಿತ್ತು. ಯಾರು ಹೋರಾಟಕ್ಕೆ ಕೈ ಜೋಡಿಸಲ್ಲ ಎಂದು ಹೇಳಿರಲಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಚುನಾವಣೆ ವೇಳೆ ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಅದು ರಾಜಕೀಯ ಪ್ರೇರಿತ ಪಾದಯಾತ್ರೆಯಾಗಿತ್ತು. ಹೀಗಾಗಿ ಸಿನಿಮಾ ನಟ-ನಟಿಯರು ರಾಜಕೀಯ ಪ್ರೇರಿತ ಪಾದಯಾತ್ರೆಯಲ್ಲಿ ಭಾಗವಹಿಸುವುದು ಸೂಕ್ತ ಅಲ್ಲವೆಂಬ ಕಾರಣಕ್ಕೆ ಭಾಗಿಯಾಗಿರಲಿಲ್ಲ. ಅಲ್ಲದೇ ಈ ವಿಚಾರದಲ್ಲಿ ಅವರು ಭಾಗಿಯಾಗದೇ ಇರುವುದು ಅವರ ವೈಯಕ್ತಿಕ ಅಭಿಪ್ರಾಯ ಇರಬಹುದು. ಯಾರಿಗೂ ನೀವು ಕಟ್ಟುನಿಟ್ಟಾಗಿ ಹೋರಾಟದಲ್ಲಿ ಭಾಗಿಯಾಗಿ ಎಂದು ತಾಕೀತು ಮಾಡಿದರೂ, ಇಲ್ಲಿ ಯಾರು ಕೇಳೋರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಸಾಕಷ್ಟು ಸರ್ಕಾರಗಳು ಬಂದಿವೆ, ಹೋಗಿವೆ. ಸಿನಿಮಾ ರಂಗದವರು ರಾಜ್ಯದಲ್ಲಿ ಅನೇಕ ಮುಖ್ಯಮಂತಿಗಳನ್ನು ನೋಡಿದ್ದಾರೆ. ಆದರೆ ರಾಜ್ಯದ ರಾಜಕೀಯದಲ್ಲಿ ಇಂತಹ ಹೇಳಿಕೆಯನ್ನು ಯಾರೂ ನೀಡಿಲ್ಲ. ಹಾಗಾಗಿ ಇಂತಹ ಹೇಳಿಕೆಯಿಂದ ಕಲಾವಿದರನ್ನು ಪ್ರಚೋದನೆ ಮಾಡೋದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಕಲಾವಿದರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆದ ಸಮಯದಲ್ಲಿ ಹೊರಗೆ ಬಂದು ಮುಂದಿನ ದಿನಗಳಲ್ಲಿ ಮಾತನಾಡುತ್ತಾರೆ. ಕಲಾವಿದರು ತಮ್ಮ ಶ್ರಮದಿಂದ ಗೌರವದ ಬದುಕು ಕಟ್ಟಿಕೊಂಡಿದ್ದಾರೆ. ಅಲ್ಲದೇ ಕಷ್ಟಪಟ್ಟು ಸಾಲ ಮಾಡಿ ಸಿನಿಮಾ ಮಾಡುತ್ತಾರೆ. ಹೀಗಾಗಿ ಕಲಾವಿದರ ಮೇಲೆ ದಬ್ಬಾಳಿಕೆ ಹಾಗೂ ದೌರ್ಜನ್ಯದ ಹೇಳಿಕೆಗಳನ್ನು ನೀಡುವುದನ್ನು ಈ ರಾಜ್ಯದ ಜನತೆ ಸಹಿಸೋದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…