ರಾಜ್ಯ

ಡಿಸಿಎಂ ಡಿಕೆಶಿ ಅವರಿಂದ ಆ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ್ದರು. ಆದರೆ  ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಅವರಿಂದ ಆ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ. ಶಿವಕುಮಾರ್ ಅವರ ವಾರ್ನಿಂಗ್‌ಗೆ ಯಾರೂ ಹೆದರಿ ಕೂರೋದಿಲ್ಲ. ಡಿಕೆಶಿ ಹೇಳಿಕೆ ಕಲಾವಿದರು, ನಿರ್ಮಾಪಕ, ನಿರ್ದೇಶಕರು ಹಾಗೂ ತಂತ್ರಜ್ಞರ ಮನಸ್ಸಿಗೆ ನೋವು ಉಂಟು ಮಾಡಿದೆ. ಕಲಾವಿದರು ತುಂಬಾ ಸೂಕ್ಷ್ಮ ಸ್ವಭಾವದ ವ್ಯಕ್ತಿಗಳು. ಡಾ.ರಾಜ್‌ಕುಮಾರ್ ಹೋರಾಟ ಮಾಡಿದಾಗ ಇಡೀ ಚಿತ್ರರಂಗ ಭಾಗಿಯಾಗಿತ್ತು. ಯಾರು ಹೋರಾಟಕ್ಕೆ ಕೈ ಜೋಡಿಸಲ್ಲ ಎಂದು ಹೇಳಿರಲಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದವರು ರಾಜ್ಯದಲ್ಲಿ ಚುನಾವಣೆ ವೇಳೆ ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಅದು ರಾಜಕೀಯ ಪ್ರೇರಿತ ಪಾದಯಾತ್ರೆಯಾಗಿತ್ತು. ಹೀಗಾಗಿ ಸಿನಿಮಾ ನಟ-ನಟಿಯರು ರಾಜಕೀಯ ಪ್ರೇರಿತ ಪಾದಯಾತ್ರೆಯಲ್ಲಿ ಭಾಗವಹಿಸುವುದು ಸೂಕ್ತ ಅಲ್ಲವೆಂಬ ಕಾರಣಕ್ಕೆ ಭಾಗಿಯಾಗಿರಲಿಲ್ಲ. ಅಲ್ಲದೇ ಈ ವಿಚಾರದಲ್ಲಿ ಅವರು ಭಾಗಿಯಾಗದೇ ಇರುವುದು ಅವರ ವೈಯಕ್ತಿಕ ಅಭಿಪ್ರಾಯ ಇರಬಹುದು. ಯಾರಿಗೂ ನೀವು ಕಟ್ಟುನಿಟ್ಟಾಗಿ ಹೋರಾಟದಲ್ಲಿ ಭಾಗಿಯಾಗಿ ಎಂದು ತಾಕೀತು ಮಾಡಿದರೂ, ಇಲ್ಲಿ ಯಾರು ಕೇಳೋರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಸಾಕಷ್ಟು ಸರ್ಕಾರಗಳು ಬಂದಿವೆ, ಹೋಗಿವೆ. ಸಿನಿಮಾ ರಂಗದವರು ರಾಜ್ಯದಲ್ಲಿ ಅನೇಕ ಮುಖ್ಯಮಂತಿಗಳನ್ನು ನೋಡಿದ್ದಾರೆ. ಆದರೆ ರಾಜ್ಯದ ರಾಜಕೀಯದಲ್ಲಿ ಇಂತಹ ಹೇಳಿಕೆಯನ್ನು ಯಾರೂ ನೀಡಿಲ್ಲ. ಹಾಗಾಗಿ ಇಂತಹ ಹೇಳಿಕೆಯಿಂದ ಕಲಾವಿದರನ್ನು ಪ್ರಚೋದನೆ ಮಾಡೋದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಕಲಾವಿದರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆದ ಸಮಯದಲ್ಲಿ ಹೊರಗೆ ಬಂದು ಮುಂದಿನ ದಿನಗಳಲ್ಲಿ ಮಾತನಾಡುತ್ತಾರೆ. ಕಲಾವಿದರು ತಮ್ಮ ಶ್ರಮದಿಂದ ಗೌರವದ ಬದುಕು ಕಟ್ಟಿಕೊಂಡಿದ್ದಾರೆ. ಅಲ್ಲದೇ ಕಷ್ಟಪಟ್ಟು ಸಾಲ ಮಾಡಿ ಸಿನಿಮಾ ಮಾಡುತ್ತಾರೆ. ಹೀಗಾಗಿ ಕಲಾವಿದರ ಮೇಲೆ ದಬ್ಬಾಳಿಕೆ ಹಾಗೂ ದೌರ್ಜನ್ಯದ ಹೇಳಿಕೆಗಳನ್ನು ನೀಡುವುದನ್ನು ಈ ರಾಜ್ಯದ ಜನತೆ ಸಹಿಸೋದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

2 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

2 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

2 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

3 hours ago