ರಾಜ್ಯ

ಮತ್ತೊಂದು ಪೆಟ್ಟು ತಿಂದು ಸಹಿಸುವ ಶಕ್ತಿ ಇಲ್ಲ ಎಂದು ನಿಖಿಲ್‌ ಹೇಳಿದ್ದಾನೆ : ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ಮತ್ತೊಮ್ಮೆ ಪೆಟ್ಟು ತಿಂದು ಸಹಿಸುವ ಶಕ್ತಿ ನನಗಿಲ್ಲ ಎಂದು ನಿಖಿಲ್‌ ನನ್ನ ಬಳಿ  ಹೇಳಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿದ್ದೇನೆ, ಮೂರನೆ ಬಾರಿ ಹೆಚ್ಚು ಕಮ್ಮಿ ಆದರೆ ತಡೆಯುವ ಶಕ್ತಿ ಇಲ್ಲ ಎಂದು ನಿಖಿಲ್‌ ನನ್ನ ಬಳಿ ಹೇಳಿದ್ದಾನೆ ಎಂದು ಹೇಳಿದರು.

ರಾಜಕೀಯದಲ್ಲಿ ಮತ್ತೊಮ್ಮೆ ಪೆಟ್ಟು ತಿಂದು ತಡೆದುಕೊಳ್ಳುವ ಶಕ್ತಿ ಇಲ್ಲ. ಹೀಗಾಗಿ ನನಗೆ ಆತುರ ಇಲ್ಲ. ಪಕ್ಷ ಸಂಘಟನೆ ಮಾಡುತ್ತೆನೆ. ನಿಮಗೂ ಆರೋಗ್ಯ ಸರಿ ಇಲ್ಲದ ಕಾರಣ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್‌ ತಿಳಿಸಿದ್ದಾನೆ ಎಂದರು.

ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ನಮ್ಮ ಪಕ್ಷದ ಎಲ್ಲಾ ನಾಯಕರ ಮುಂದೆ ಹೇಳಿದ್ದಾನೆ.

ನಿಖಿಲ್‌ ಮನವೊಲಿಸಲು ಪಕ್ಷದ ಎಲ್ಲಾ ಹಿರಿಯ ನಾಯಕರು ಪ್ರಯತ್ನ ಪಟ್ಟಿದ್ದಾರೆ. ಆದರೇ ಈ ಬಾರಿ ನಿಖಿಲ್‌ ಸ್ಪರ್ಧೆ ಮಾಡುವುದಿಲ್ಲ ಎಂದು ಕಠಿಣ ನಿರ್ಧಾರ ಮಾಡಿದ್ದಾನೆ ಎಂದು ತಿಳಿಸಿದರು.

ಹೀಗಾಗಿ ಅನಿವಾರ್ಯ ಪರಿಸ್ಥಿತಿಯಲ್ಲಿ, ಮಂಡ್ಯ ಜಿಲ್ಲೆಯ ಜನರ ರುಣ ತೀರಿಸುವ ನಿಟ್ಟಿನಲ್ಲಿ ಅವರ ಅಸೆಯಂತೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

14 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

37 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

55 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago