ಬೆಂಗಳೂರು : ಮತ್ತೊಮ್ಮೆ ಪೆಟ್ಟು ತಿಂದು ಸಹಿಸುವ ಶಕ್ತಿ ನನಗಿಲ್ಲ ಎಂದು ನಿಖಿಲ್ ನನ್ನ ಬಳಿ ಹೇಳಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿದ್ದೇನೆ, ಮೂರನೆ ಬಾರಿ ಹೆಚ್ಚು ಕಮ್ಮಿ ಆದರೆ ತಡೆಯುವ ಶಕ್ತಿ ಇಲ್ಲ ಎಂದು ನಿಖಿಲ್ ನನ್ನ ಬಳಿ ಹೇಳಿದ್ದಾನೆ ಎಂದು ಹೇಳಿದರು.
ರಾಜಕೀಯದಲ್ಲಿ ಮತ್ತೊಮ್ಮೆ ಪೆಟ್ಟು ತಿಂದು ತಡೆದುಕೊಳ್ಳುವ ಶಕ್ತಿ ಇಲ್ಲ. ಹೀಗಾಗಿ ನನಗೆ ಆತುರ ಇಲ್ಲ. ಪಕ್ಷ ಸಂಘಟನೆ ಮಾಡುತ್ತೆನೆ. ನಿಮಗೂ ಆರೋಗ್ಯ ಸರಿ ಇಲ್ಲದ ಕಾರಣ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್ ತಿಳಿಸಿದ್ದಾನೆ ಎಂದರು.
ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ನಮ್ಮ ಪಕ್ಷದ ಎಲ್ಲಾ ನಾಯಕರ ಮುಂದೆ ಹೇಳಿದ್ದಾನೆ.
ನಿಖಿಲ್ ಮನವೊಲಿಸಲು ಪಕ್ಷದ ಎಲ್ಲಾ ಹಿರಿಯ ನಾಯಕರು ಪ್ರಯತ್ನ ಪಟ್ಟಿದ್ದಾರೆ. ಆದರೇ ಈ ಬಾರಿ ನಿಖಿಲ್ ಸ್ಪರ್ಧೆ ಮಾಡುವುದಿಲ್ಲ ಎಂದು ಕಠಿಣ ನಿರ್ಧಾರ ಮಾಡಿದ್ದಾನೆ ಎಂದು ತಿಳಿಸಿದರು.
ಹೀಗಾಗಿ ಅನಿವಾರ್ಯ ಪರಿಸ್ಥಿತಿಯಲ್ಲಿ, ಮಂಡ್ಯ ಜಿಲ್ಲೆಯ ಜನರ ರುಣ ತೀರಿಸುವ ನಿಟ್ಟಿನಲ್ಲಿ ಅವರ ಅಸೆಯಂತೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…