ಮಂಡ್ಯ : ಹಿರೀಕರಾಗಿರುವ ರಾಜಣ್ಣ, ಶ್ರೀಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ ಕೆ.ಎನ್ ರಾಜಣ್ಣ ಚಂದ್ರಶೇಖರ್ ಶ್ರೀಗಳಿಗೆ ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ನಿಖಿಲ್, ರಾಜಣ್ಣನವರು ವಯಸ್ಸಿನಲ್ಲಿ ಹಿರೀಕರು, ಅವರ ಬಗ್ಗೆ ಗೌರವವಿದೆ, ಅದರೆ ಸ್ವಾಮೀಜಿಗಳು ಸಮಾಜಮುಖಿ ಕೆಲಸ ಮಾಡುತ್ತಾರೆ, ಅವರ ಬಗ್ಗೆ ಲಘುವಾಗಿ ರಾಜಣ್ಣ ಮಾತಾಡೋದು ಸರಿಯಲ್ಲ, ಅವರು ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಎಂದಷ್ಟೇ ಹೇಳುತ್ತೇನೆ ಎಂದರು.
ಇದೇ ವೇಳೆ ಕುಮಾರಸ್ವಾಮಿಯವರು ಮತ್ತೊಮ್ಮೆ ಸಿಎಂ ಆಗ್ತಾರ..? ಕಾಂಗ್ರೆಸ್ ಶಾಸಕರು ನಿಮ್ಮ ಸಂಪರ್ಕದಲ್ಲಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಕಾಲವೇ ಎಲ್ಲವನ್ನೂ ನಿರ್ಣಯಿಸುತ್ತದೆ ಭಗವಂತನಿಗೆ ಮಾತ್ರ ಗೊತ್ತಿರುವ ಸಂಗತಿಗಳನ್ನು ನನಗೆ ಕೇಳಿದರೆ ಹೇಗೆ..? ಕೆಲವು ಸಂಗತಿಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡೋದು ಸೂಕ್ತವಲ್ಲ ಎಂದು ಒಗಟಿನ ರೂಪದಲ್ಲಿ ಮಾತನಾಡಿದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…