ರಾಜ್ಯ

ಡೆಂಗ್ಯೂ ಜೊತೆಗೆ ರಾಜ್ಯದಲ್ಲಿ ನಿಫಾ ವೈರಸ್ ಆತಂಕ

ಬೆಂಗಳೂರು : ರಾಜ್ಯಕ್ಕೆ ಕಳೆದ ಒಂದು ತಿಂಗಳಿಂದ ವೈರಸ್‌ ಗಳ ಕಾಟ ಶುರುವಾಗಿದ್ದು, ಒಂದು ಕಡೆ ಡೆಂಗ್ಯೂ ಜನರನ್ನ ಬಿಟ್ಟು ಬಿಡದೆ ಕಾಡುತ್ತಿದ್ರೆ, ಮತ್ತೊಂದು ಕಡೆ ನಿಫಾ ವೈರಸ್‌ ಆತಂಕ ಶುರುವಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ನಿಫಾ ವೈರಸ್‌ ಆತಂಕ ಎದುರಾಗಿದೆ. ಈಗಾಗಲೇ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಗೆ ೧೪ ವರ್ಷದ ಬಾಲಕ ಸಾವನ್ನಪ್ಪಿದ ಬೆನ್ನಲ್ಲೆ ರಾಜ್ಯದ ಕೇರಳ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ  ಘೋಷಿಸಲಾಗಿದೆ. ಬಾವಲಿ ಮತ್ತು ಹಂದಿಗಳ ಮೈಯ ದ್ರವದ ಮೂಲಕ ಮನುಷ್ಯರಿಗೆ ಹರಡುವ ವೈರಸ್‌ ಇದಾಗಿದ್ದು, ಇದು ಮನುಷ್ಯರಿಂದ ಮನುಷ್ಯರಿಗೂ ಹರಡುತ್ತದೆ. ಕೋವಿಡ್‌ ಸೋಂಕಿನಂತೆ ಈ ನಿಫಾ ವೈರಸ್‌ ಸೋಂಕು ಗುಣಪಡಿಸಲು ಯಾವುದೇ ಚಿಕಿತ್ಸೆ ಇಲ್ಲ. ಮರಣ ಪ್ರಮಾಣ ಶೇ.೭೦ ರಷ್ಟಿದೆ. ಹೀಗಾಗಿ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕ ಜಿಲ್ಲೆಗಳಲ್ಲೂ ಕೂಡ ಹೂ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೆ ಗಡಿಯಲ್ಲಿ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

4 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

5 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

5 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

5 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

5 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

5 hours ago