ಬೆಂಗಳೂರು : ಕರ್ನಾಟಕದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೪೮೬ ಡೆಂಗ್ಯೂ ಕೇಸ್ ದಾಖಲಾಗಿದೆ. ಇದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಪಕ್ಕದ ರಾಜ್ಯ ಕೇರಳದ ಮಲಪ್ಪುರಂನಲ್ಲಿ ೧೪ ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಡೆಂಗ್ಯೂ ಜೊತೆಗೆ ನಿಫಾ ಆತಂಕ ಶುರುವಾಗಿದೆ.
ನಿಫಾ ವೈರಸ್ ಇರುವುದನ್ನ ಆರೋಗ್ಯ ಇಲಾಖೆ ದೃಢಪಡಿಸಿದೆ. ನಿಫಾ ಸೋಂಕಿತ ಬಾಲಕನಿಗೆ ಕೊಯಿಕ್ಕೋಡ್ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಮನೆಯವರು ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಲಾಗಿದೆ. ಬಾಲಕನ ಭೇಟಿಗೆ ಯಾರಿಗೂ ಅವಕಾಶ ಕೊಡದೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.
ಇನ್ನು ಈ ನಿಫಾ ವೈರಸ್ ಬಾವಲಿ ಮತ್ತು ಹಂದಿಗಳ ದೈಹಿಕ ದ್ರವದ ಮೂಲಕ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಿದ ಉದಾಹರಣೆ ಕೂಡ ಇದೆ. ಸದ್ಯ ಈ ಸೋಂಕಿಗೆ ಯಾವುದೇ ಚಿಕಿತ್ಸೆ ಇಲ್ಲ. ಹೀಗಾಗಿ ಮರಣ ಪ್ರಮಾಣ ಶೇ ೭೦ರಷ್ಟು ಇದೆ.
ಈ ನಿಫಾ ವೈರಸ್ ತಗುಲಿದಾಗ ಮೊದಲಿಗೆ ಜ್ವರ ಕಾಣಿಸಿಕೊಳ್ಳುತ್ತದೆ. ಉಸಿರಾಟದ ತೊಂದರೆ, ತಲೆನೋವು, ವಾಂತಿ ಆಗುತ್ತದೆ. ಮೆದುಳಿನ ಉರಿಯೂತ, ದೇಹದಲ್ಲಿ ಸೆಳೆತ ಉಂಟಾಗುತ್ತದೆ. ಸೋಂಕಿತ ವ್ಯಕ್ತಿ ಕೋಮಾ ಸ್ಥಿತಿಗೆ ಜಾರಿ ಮೃತಪಡಬಹುದು.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…