ಬೆಂಗಳೂರು : ಕರ್ನಾಟಕದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೪೮೬ ಡೆಂಗ್ಯೂ ಕೇಸ್ ದಾಖಲಾಗಿದೆ. ಇದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಪಕ್ಕದ ರಾಜ್ಯ ಕೇರಳದ ಮಲಪ್ಪುರಂನಲ್ಲಿ ೧೪ ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಡೆಂಗ್ಯೂ ಜೊತೆಗೆ ನಿಫಾ ಆತಂಕ ಶುರುವಾಗಿದೆ.
ನಿಫಾ ವೈರಸ್ ಇರುವುದನ್ನ ಆರೋಗ್ಯ ಇಲಾಖೆ ದೃಢಪಡಿಸಿದೆ. ನಿಫಾ ಸೋಂಕಿತ ಬಾಲಕನಿಗೆ ಕೊಯಿಕ್ಕೋಡ್ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಮನೆಯವರು ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಲಾಗಿದೆ. ಬಾಲಕನ ಭೇಟಿಗೆ ಯಾರಿಗೂ ಅವಕಾಶ ಕೊಡದೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.
ಇನ್ನು ಈ ನಿಫಾ ವೈರಸ್ ಬಾವಲಿ ಮತ್ತು ಹಂದಿಗಳ ದೈಹಿಕ ದ್ರವದ ಮೂಲಕ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಿದ ಉದಾಹರಣೆ ಕೂಡ ಇದೆ. ಸದ್ಯ ಈ ಸೋಂಕಿಗೆ ಯಾವುದೇ ಚಿಕಿತ್ಸೆ ಇಲ್ಲ. ಹೀಗಾಗಿ ಮರಣ ಪ್ರಮಾಣ ಶೇ ೭೦ರಷ್ಟು ಇದೆ.
ಈ ನಿಫಾ ವೈರಸ್ ತಗುಲಿದಾಗ ಮೊದಲಿಗೆ ಜ್ವರ ಕಾಣಿಸಿಕೊಳ್ಳುತ್ತದೆ. ಉಸಿರಾಟದ ತೊಂದರೆ, ತಲೆನೋವು, ವಾಂತಿ ಆಗುತ್ತದೆ. ಮೆದುಳಿನ ಉರಿಯೂತ, ದೇಹದಲ್ಲಿ ಸೆಳೆತ ಉಂಟಾಗುತ್ತದೆ. ಸೋಂಕಿತ ವ್ಯಕ್ತಿ ಕೋಮಾ ಸ್ಥಿತಿಗೆ ಜಾರಿ ಮೃತಪಡಬಹುದು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…