ಬೆಂಗಳೂರು : ಕರ್ನಾಟಕದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೪೮೬ ಡೆಂಗ್ಯೂ ಕೇಸ್ ದಾಖಲಾಗಿದೆ. ಇದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಪಕ್ಕದ ರಾಜ್ಯ ಕೇರಳದ ಮಲಪ್ಪುರಂನಲ್ಲಿ ೧೪ ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಡೆಂಗ್ಯೂ ಜೊತೆಗೆ ನಿಫಾ ಆತಂಕ ಶುರುವಾಗಿದೆ.
ನಿಫಾ ವೈರಸ್ ಇರುವುದನ್ನ ಆರೋಗ್ಯ ಇಲಾಖೆ ದೃಢಪಡಿಸಿದೆ. ನಿಫಾ ಸೋಂಕಿತ ಬಾಲಕನಿಗೆ ಕೊಯಿಕ್ಕೋಡ್ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಮನೆಯವರು ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಲಾಗಿದೆ. ಬಾಲಕನ ಭೇಟಿಗೆ ಯಾರಿಗೂ ಅವಕಾಶ ಕೊಡದೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.
ಇನ್ನು ಈ ನಿಫಾ ವೈರಸ್ ಬಾವಲಿ ಮತ್ತು ಹಂದಿಗಳ ದೈಹಿಕ ದ್ರವದ ಮೂಲಕ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಿದ ಉದಾಹರಣೆ ಕೂಡ ಇದೆ. ಸದ್ಯ ಈ ಸೋಂಕಿಗೆ ಯಾವುದೇ ಚಿಕಿತ್ಸೆ ಇಲ್ಲ. ಹೀಗಾಗಿ ಮರಣ ಪ್ರಮಾಣ ಶೇ ೭೦ರಷ್ಟು ಇದೆ.
ಈ ನಿಫಾ ವೈರಸ್ ತಗುಲಿದಾಗ ಮೊದಲಿಗೆ ಜ್ವರ ಕಾಣಿಸಿಕೊಳ್ಳುತ್ತದೆ. ಉಸಿರಾಟದ ತೊಂದರೆ, ತಲೆನೋವು, ವಾಂತಿ ಆಗುತ್ತದೆ. ಮೆದುಳಿನ ಉರಿಯೂತ, ದೇಹದಲ್ಲಿ ಸೆಳೆತ ಉಂಟಾಗುತ್ತದೆ. ಸೋಂಕಿತ ವ್ಯಕ್ತಿ ಕೋಮಾ ಸ್ಥಿತಿಗೆ ಜಾರಿ ಮೃತಪಡಬಹುದು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…