ಬೆಂಗಳೂರು : ಕರ್ನಾಟಕದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೪೮೬ ಡೆಂಗ್ಯೂ ಕೇಸ್ ದಾಖಲಾಗಿದೆ. ಇದರ ಮಧ್ಯೆ ಇದೀಗ ಕರ್ನಾಟಕಕ್ಕೆ ನಿಫಾ ಕಂಟಕ ಎದುರಾಗಿದೆ. ಪಕ್ಕದ ರಾಜ್ಯ ಕೇರಳದ ಮಲಪ್ಪುರಂನಲ್ಲಿ ೧೪ ವರ್ಷದ ಬಾಲಕನಿಗೆ ನಿಫಾ ವೈರಸ್ ದೃಢವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಡೆಂಗ್ಯೂ ಜೊತೆಗೆ ನಿಫಾ ಆತಂಕ ಶುರುವಾಗಿದೆ.
ನಿಫಾ ವೈರಸ್ ಇರುವುದನ್ನ ಆರೋಗ್ಯ ಇಲಾಖೆ ದೃಢಪಡಿಸಿದೆ. ನಿಫಾ ಸೋಂಕಿತ ಬಾಲಕನಿಗೆ ಕೊಯಿಕ್ಕೋಡ್ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಮನೆಯವರು ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಲಾಗಿದೆ. ಬಾಲಕನ ಭೇಟಿಗೆ ಯಾರಿಗೂ ಅವಕಾಶ ಕೊಡದೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.
ಇನ್ನು ಈ ನಿಫಾ ವೈರಸ್ ಬಾವಲಿ ಮತ್ತು ಹಂದಿಗಳ ದೈಹಿಕ ದ್ರವದ ಮೂಲಕ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಿದ ಉದಾಹರಣೆ ಕೂಡ ಇದೆ. ಸದ್ಯ ಈ ಸೋಂಕಿಗೆ ಯಾವುದೇ ಚಿಕಿತ್ಸೆ ಇಲ್ಲ. ಹೀಗಾಗಿ ಮರಣ ಪ್ರಮಾಣ ಶೇ ೭೦ರಷ್ಟು ಇದೆ.
ಈ ನಿಫಾ ವೈರಸ್ ತಗುಲಿದಾಗ ಮೊದಲಿಗೆ ಜ್ವರ ಕಾಣಿಸಿಕೊಳ್ಳುತ್ತದೆ. ಉಸಿರಾಟದ ತೊಂದರೆ, ತಲೆನೋವು, ವಾಂತಿ ಆಗುತ್ತದೆ. ಮೆದುಳಿನ ಉರಿಯೂತ, ದೇಹದಲ್ಲಿ ಸೆಳೆತ ಉಂಟಾಗುತ್ತದೆ. ಸೋಂಕಿತ ವ್ಯಕ್ತಿ ಕೋಮಾ ಸ್ಥಿತಿಗೆ ಜಾರಿ ಮೃತಪಡಬಹುದು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…