ಕಲಬುರಗಿ : ನಿತೀಶ್ ಕುಮಾರ್ ಮಹಾ ಘಟಬಂಧನ್ ತೊರೆಯುವ ಬಗ್ಗೆ ಮೊದಲೆ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡುವಾಗ ನಿತೀಶ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದರು.
ಅವರು ಹೇಳಿದ್ದು ಇಂದು ನಿಜವಾಗಿದೆ, ಆಯಾರಾಮ್ ಗಯಾರಾಮ್ ಸಂಸ್ಕೃತಿವುಳ್ಳ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ ಎಂದು ಟೀಕಿಸಿದರು.
ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ತೊರೆಯುತ್ತಿರುವ ಬಗ್ಗೆ ಮುಂಚೆಯೇ ಗೊತ್ತಿದ್ದರಿಂದ ಅವರೊಂದಿಗೆ ಮಾತುಕತೆಗೆ ಯತ್ನಿಸಿದ್ದೆವು,ಅಂತಿಮವಾಗಿ ಅವರು ಮೈತ್ರಿಕೂಟ ಬಿಟ್ಟು ಹೋಗಿದ್ದಾರೆ ಎಂದು ತಿಳಿಸಿದರು.
ನಿತೀಶ್ ಹೊರ ಹೋಗಲು ಬಯಸಿದ್ದರಿಂದ ಮೈತ್ರಿ ತೊರೆದಿದ್ದಾರೆ. ಆದರೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಖರ್ಗೆ ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳೊಂದಿಗೆ ಚರ್ಚಿಸಲು ಆರು ಜನರ ಸಮಿತಿ ರಚಿಸಲಾಗಿದೆ.ಇನ್ನೂ ಕೆಲವೆಡೆ ಒಮ್ಮತಕ್ಕೆ ಬಂದಿಲ್ಲ ಎಂದು ಖರ್ಗೆ ಹೇಳಿದರು.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…