ಕಲಬುರಗಿ : ನಿತೀಶ್ ಕುಮಾರ್ ಮಹಾ ಘಟಬಂಧನ್ ತೊರೆಯುವ ಬಗ್ಗೆ ಮೊದಲೆ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡುವಾಗ ನಿತೀಶ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದರು.
ಅವರು ಹೇಳಿದ್ದು ಇಂದು ನಿಜವಾಗಿದೆ, ಆಯಾರಾಮ್ ಗಯಾರಾಮ್ ಸಂಸ್ಕೃತಿವುಳ್ಳ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ ಎಂದು ಟೀಕಿಸಿದರು.
ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ತೊರೆಯುತ್ತಿರುವ ಬಗ್ಗೆ ಮುಂಚೆಯೇ ಗೊತ್ತಿದ್ದರಿಂದ ಅವರೊಂದಿಗೆ ಮಾತುಕತೆಗೆ ಯತ್ನಿಸಿದ್ದೆವು,ಅಂತಿಮವಾಗಿ ಅವರು ಮೈತ್ರಿಕೂಟ ಬಿಟ್ಟು ಹೋಗಿದ್ದಾರೆ ಎಂದು ತಿಳಿಸಿದರು.
ನಿತೀಶ್ ಹೊರ ಹೋಗಲು ಬಯಸಿದ್ದರಿಂದ ಮೈತ್ರಿ ತೊರೆದಿದ್ದಾರೆ. ಆದರೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಖರ್ಗೆ ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳೊಂದಿಗೆ ಚರ್ಚಿಸಲು ಆರು ಜನರ ಸಮಿತಿ ರಚಿಸಲಾಗಿದೆ.ಇನ್ನೂ ಕೆಲವೆಡೆ ಒಮ್ಮತಕ್ಕೆ ಬಂದಿಲ್ಲ ಎಂದು ಖರ್ಗೆ ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…