ರಾಜ್ಯ

ಮಾಲ್‌ ಆಫ್‌ ಏಷ್ಯಾ ವಿರುದ್ಧ ಕ್ರಮ ಬೇಡ: ಹೈಕೋರ್ಟ್‌

ಬೆಂಗಳೂರು : ಒಂದು ದಿನದ ಮಟ್ಟಿಗೆ ಮಾಲ್ ಅನ್ನು ಮುಚ್ಚಲಾಗುವುದು ಎಂಬ ಮಾಲ್ ಆಫ್ ಏಷ್ಯಾದ ಪರ ವಕೀಲರ ಭರವಸೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಮಾಲ್ ವಿರುದ್ದ ಕ್ರಮಕ್ಕೆ ಮುಂದಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 31 ಮತ್ತು ಜನವರಿ 15ರ ನಡುವೆ ಮಾಲ್‌ಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ಫೀನಿಕ್ಸ್ ಮಾಲ್ ಆಫ್ ಏಷ್ಯಾದ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯನ್ನು ಭಾನುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಶೇಷ ಪೀಠದ ಮುಂದೆ ಮಾಲ್ ಪರ ವಕೀಲರು ಮಾಹಿತಿ ನೀಡಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಾಲ್ ಆಡಳಿತವು ಮಾಲ್ ಒಂದು ದಿನದ ಮಟ್ಟಿಗೆ ಮುಚ್ಚಲಾಗುವುದು. ಜತೆಗೆ, ಪೊಲೀಸ್ ಆಯುಕ್ತರ ಆದೇಶದಲ್ಲಿ ತಿಳಿಸಿರುವ ಸಮಸ್ಯೆಗಳಿಗೆ ಸೌಹಾರ್ದಯುತವಾಗಿ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಾಲ್ ಪರ ವಕೀಲರು ಭರವಸೆ ನೀಡಿದರು.

ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು. ಅಲ್ಲದೆ, ಸೌಹಾರ್ದಯುತವಾಗಿ ಪರಿಹರಿಸುವವರೆಗೆ ಅಥವಾ ನ್ಯಾಯಾಲಯದಿಂದ ಮುಂದಿನ ಆದೇಶವನ್ನು ನೀಡುವವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಪೀಠ ತಿಳಿಸಿದೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago