ರಾಜ್ಯ

ಹೈಕಮಾಂಡ್‌ ಮುಂದೆ ಹೆಚ್ಚುವರಿ ಡಿಸಿಎಂ ಪ್ರಸ್ತಾವನೆ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಸಿಎಂ ಸಿದ್ದರಾಯ್ಯ ಆಪ್ತಬಣ ಪಟ್ಟು ಹಿಡಿದಿದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆಗಳು ಹೆಚ್ಚಾಗಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್‌ ಮುಂದೆ ಪ್ರಸ್ತಾವನೆಯಿಲ್ಲ. ಈ ವಿಷಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಮೂರು ಡಿಸಿಎಂ ಹುದ್ದೆ ವಿಚಾರ ನಮ್ಮ ಮುಂದೆ ಇಲ್ಲ. ಇವೆಲ್ಲವೂ ಕೇವಲ ಉಹಾಪೋಹ. ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರಗಳು ಚರ್ಚೆಗೆ ಬರಬಾರದು. ಸದ್ಯ ಸರ್ಕಾರದ ಗಮನ ಅಭಿವೃದ್ಧಿ ಕಡೆ, ಗ್ಯಾರೆಂಟಿಗಳ ಸಮರ್ಪಕ ಅನುಷ್ಠಾನದ ಕಡೆ ಇರಬೇಕು. ನಮ್ಮ ಗುರಿ ತಲುಪುವ ತನಕ ಗಮನ ಬೇರೆಡೆಗೆ ಕೊಡಬಾರದು ಎಂದು ಕರೆ ನೀಡಿದ್ದಾರೆ.

ಇನ್ನು ನಾಳೆ(ಜನವರಿ ೧೦) ಲೋಕಸಭಾ ಚುನಾವಣೆಗೆ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು, ಇಳಿಸಬಾರದು ಎಂಬುದರ ಬಗ್ಗೆ ಚರ್ಚೆ ಮಾಡಲಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರ ನೇಮಕ ಮಾಡಲಾಗಿದ್ದು, ನಾಳೆ ನಡೆಯಲಿರುವ ಸಭೆಯೊಂದಿಗೆ ಅನೇಕ ಘಟಕಗಳ ಸಭೆ ಕೂಡ ಕರೆದಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಭಾರತ ಮತ್ತು ಮಾಲ್ಡೀವ್ಸ್‌ ಸಡುವಿನ ಬಿಗುವಿನ ವಾತಾವರಣ ಬಗ್ಗೆ ಮಾತನಾಡಿರುವ ಖರ್ಗೆ, ಮೊದಲು ನಾವು ನರೆಯವರೊಂದಿಗೆ ಚೆನ್ನಾಗಿರಬೇಕು. ಜೊತೆಗೆ ಕೆಟ್ಟ ಪರಿಸ್ಥಿತಿ ಬಂದಾಗ ಹೋರಾಟಕ್ಕೂ ಸಿದ್ದವಿರಬೇಕು. ಇಂದಿರಾ ಗಾಂಧಿ ಅವರು ಪಾಕಿಸ್ತಾನವನ್ನು ಬೇರ್ಪಡಿಸಿ ಹೇಗೆ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಹಾಗೆ ಹೋರಾಟ ಮಾಡಬೇಕು. ಆದರೆ ಪ್ರಧಾನಿ ಮೋದಿ ಅವರು ಎಲ್ಲವನ್ನು ವಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

2 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

4 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

5 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

5 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

7 hours ago