ಕಲಬುರಗಿ: ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಸಿಎಂ ಸಿದ್ದರಾಯ್ಯ ಆಪ್ತಬಣ ಪಟ್ಟು ಹಿಡಿದಿದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆಗಳು ಹೆಚ್ಚಾಗಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಹೈಕಮಾಂಡ್ ಮುಂದೆ ಪ್ರಸ್ತಾವನೆಯಿಲ್ಲ. ಈ ವಿಷಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಮೂರು ಡಿಸಿಎಂ ಹುದ್ದೆ ವಿಚಾರ ನಮ್ಮ ಮುಂದೆ ಇಲ್ಲ. ಇವೆಲ್ಲವೂ ಕೇವಲ ಉಹಾಪೋಹ. ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರಗಳು ಚರ್ಚೆಗೆ ಬರಬಾರದು. ಸದ್ಯ ಸರ್ಕಾರದ ಗಮನ ಅಭಿವೃದ್ಧಿ ಕಡೆ, ಗ್ಯಾರೆಂಟಿಗಳ ಸಮರ್ಪಕ ಅನುಷ್ಠಾನದ ಕಡೆ ಇರಬೇಕು. ನಮ್ಮ ಗುರಿ ತಲುಪುವ ತನಕ ಗಮನ ಬೇರೆಡೆಗೆ ಕೊಡಬಾರದು ಎಂದು ಕರೆ ನೀಡಿದ್ದಾರೆ.
ಇನ್ನು ನಾಳೆ(ಜನವರಿ ೧೦) ಲೋಕಸಭಾ ಚುನಾವಣೆಗೆ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು, ಇಳಿಸಬಾರದು ಎಂಬುದರ ಬಗ್ಗೆ ಚರ್ಚೆ ಮಾಡಲಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರ ನೇಮಕ ಮಾಡಲಾಗಿದ್ದು, ನಾಳೆ ನಡೆಯಲಿರುವ ಸಭೆಯೊಂದಿಗೆ ಅನೇಕ ಘಟಕಗಳ ಸಭೆ ಕೂಡ ಕರೆದಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಭಾರತ ಮತ್ತು ಮಾಲ್ಡೀವ್ಸ್ ಸಡುವಿನ ಬಿಗುವಿನ ವಾತಾವರಣ ಬಗ್ಗೆ ಮಾತನಾಡಿರುವ ಖರ್ಗೆ, ಮೊದಲು ನಾವು ನರೆಯವರೊಂದಿಗೆ ಚೆನ್ನಾಗಿರಬೇಕು. ಜೊತೆಗೆ ಕೆಟ್ಟ ಪರಿಸ್ಥಿತಿ ಬಂದಾಗ ಹೋರಾಟಕ್ಕೂ ಸಿದ್ದವಿರಬೇಕು. ಇಂದಿರಾ ಗಾಂಧಿ ಅವರು ಪಾಕಿಸ್ತಾನವನ್ನು ಬೇರ್ಪಡಿಸಿ ಹೇಗೆ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಹಾಗೆ ಹೋರಾಟ ಮಾಡಬೇಕು. ಆದರೆ ಪ್ರಧಾನಿ ಮೋದಿ ಅವರು ಎಲ್ಲವನ್ನು ವಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…