ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಬೇಕಾಗಿದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ.
ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಗೆ ಪ್ರವೇಶಾತಿಗಾಗಿ ನಿಗದಿಪಡಿಸಲಾಗಿದ್ದ ವಯೋಮಿತಿ ಬಗ್ಗೆ ಹಲವಾರು ಗೊಂದಲಗಳಿದ್ದು, ಸದ್ಯ ಈ ಎಲ್ಲಾ ಗೊಂದಲಕ್ಕೂ ತೆರೆ ಬಿದ್ದಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಎಲ್ಕೆಜಿಗೆ 4-6 ವರ್ಷ, ಯುಕೆಜಿಗೆ 5-7 ವರ್ಷ ಹಾಗೂ ಒಂದನೇ ತರಗತಿಗೆ 6-8 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಇದನ್ನು ಮೀರಿದ ಬಳಿಕ ಪ್ರವೇಶಾತಿ ದೊರೆಯುವುದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.
ಎಂಟು ವರ್ಷ ಮೀರಿದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುವುದು ಹಾಗೂ ಅಂತಹ ಮಕ್ಕಳನ್ನು ಅವರ ವಯೋಮಿತಿಗೆ ತಕ್ಕಂತೆ ತರಗತಿಗಳಿಗೆ ಪ್ರವೇಶ ನೀಡಲಾಗುವುದು ಎಂದು ಸ್ಪಷ್ಟನೆ ನೀಡಿದೆ. ಆ ಮೂಲಕ ಇದ್ದ ಎಲ್ಲಾ ಗೊಂದಲಗಳಿಗೆ ಶಿಕ್ಷಣ ಇಲಾಖೆ ಅಂತ್ಯ ಆಡಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…