madhu bangarappa
ಕೊಪ್ಪಳ: ಹಿಂದುತ್ವ ಹಾಗೂ ದೇವಸ್ಥಾನದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಡಿದ ಮಾತುಗಳು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಕೊಪ್ಪಳದಲ್ಲಿಂದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ನನ್ನ ಬಳಿ ಜನರು ದೇವಸ್ಥಾನಕ್ಕೆಂದು ದುಡ್ಡು ಕೇಳಿಕೊಂಡು ಬರ್ತಾರೆ ಅಂದ್ರೆ, ನಾನು ಯಾವ ದೇವಸ್ಥಾನಕ್ಕೂ ಹಣ ನೀಡೋದಿಲ್ಲ ಎಂದರು. ದೇವಸ್ಥಾನದಲ್ಲಿ ಗಂಟೆ ಹೊಡೆದರೆ ದೇಶದಲ್ಲಿ ಏನಾಗುತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಯಾವ ದೇವಸ್ಥಾನಕ್ಕೂ ಹಣ ನೀಡುವುದಿಲ್ಲ. ದೇವಸ್ಥಾನದಲ್ಲಿ ಗಂಟೆ ಹೊಡೆಯೋದಕ್ಕಿಂತ ಶಾಲೆಯಲ್ಲಿ ಗಂಟೆಯ ಶಬ್ಧ ಕೇಳಬೇಕು. ದೇವಸ್ಥಾನದಲ್ಲಿ ಗಂಟೆ ಹೊಡೆಯೋದ್ರಿಂದ ಯಾವುದೇ ಪ್ರಯೋಜನವಿಲ್ಲ ಎನ್ನುವ ಮಾತುಗಳು ಮತ್ತೊಂದು ವಿವಾದದ ಕಿಡಿ ಎಬ್ಬಿಸಿದೆ.
ಇನ್ನು ಕೆಲವರು ಹಿಂದುತ್ವ, ಹಿಂದುತ್ವ ಎಂದು ಮಾತನಾಡುತ್ತಾರೆ. ಹಿಂದುತ್ವ ಎಂದು ಬೊಬ್ಬೆ ಬಡಿದುಕೊಳ್ಳುವವರಿಗೇನು ಗೊತ್ತು ಬದನೆಕಾಯಿ ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸಚಿವರ ಈ ಮಾತು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಹಿಂದೂ ಪರ ಹೋರಾಟಗಾರರಿಂದ ವಿರೋಧ ವ್ಯಕ್ತವಾಗಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…