ರಾಜ್ಯ

ದೇವಾಲಯದ ಗಂಟೆ ಹೊಡೆದ್ರೆ ಪ್ರಯೋಜನವಿಲ್ಲ: ವಿವಾದದ ಕಿಡಿ ಎಬ್ಬಿಸಿದ ಸಚಿವ ಮಧು ಬಂಗಾರಪ್ಪ

ಕೊಪ್ಪಳ: ಹಿಂದುತ್ವ ಹಾಗೂ ದೇವಸ್ಥಾನದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಡಿದ ಮಾತುಗಳು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಕೊಪ್ಪಳದಲ್ಲಿಂದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ನನ್ನ ಬಳಿ ಜನರು ದೇವಸ್ಥಾನಕ್ಕೆಂದು ದುಡ್ಡು ಕೇಳಿಕೊಂಡು ಬರ್ತಾರೆ ಅಂದ್ರೆ, ನಾನು ಯಾವ ದೇವಸ್ಥಾನಕ್ಕೂ ಹಣ ನೀಡೋದಿಲ್ಲ ಎಂದರು. ದೇವಸ್ಥಾನದಲ್ಲಿ ಗಂಟೆ ಹೊಡೆದರೆ ದೇಶದಲ್ಲಿ ಏನಾಗುತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಯಾವ ದೇವಸ್ಥಾನಕ್ಕೂ ಹಣ ನೀಡುವುದಿಲ್ಲ. ದೇವಸ್ಥಾನದಲ್ಲಿ ಗಂಟೆ ಹೊಡೆಯೋದಕ್ಕಿಂತ ಶಾಲೆಯಲ್ಲಿ ಗಂಟೆಯ ಶಬ್ಧ ಕೇಳಬೇಕು. ದೇವಸ್ಥಾನದಲ್ಲಿ ಗಂಟೆ ಹೊಡೆಯೋದ್ರಿಂದ ಯಾವುದೇ ಪ್ರಯೋಜನವಿಲ್ಲ ಎನ್ನುವ ಮಾತುಗಳು ಮತ್ತೊಂದು ವಿವಾದದ ಕಿಡಿ ಎಬ್ಬಿಸಿದೆ.

ಇನ್ನು ಕೆಲವರು ಹಿಂದುತ್ವ, ಹಿಂದುತ್ವ ಎಂದು ಮಾತನಾಡುತ್ತಾರೆ. ಹಿಂದುತ್ವ ಎಂದು ಬೊಬ್ಬೆ ಬಡಿದುಕೊಳ್ಳುವವರಿಗೇನು ಗೊತ್ತು ಬದನೆಕಾಯಿ ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಚಿವರ ಈ ಮಾತು ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದ್ದು, ಹಿಂದೂ ಪರ ಹೋರಾಟಗಾರರಿಂದ ವಿರೋಧ ವ್ಯಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago