ರಾಜ್ಯ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ : ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು : ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ, ಎಂದು ಪ್ರತಿಪಕ್ಷ ನಾಯಕ ಆರ್
ಅಶೋಕ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿರುವುದು ಸರಿ ಅಲ್ಲ. ಸೇತುವೆ ನಿರ್ಮಾಣದ ಕ್ರೆಡಿಟ್ ಬಿಜೆಪಿಗೆ ಹೋಗುತ್ತಿದೆ ಎನ್ನುವ ಹತಾಶೆಯಿಂದ ಸಿಎಂ ಗೊಂದಲ ಸೃಷ್ಟಿ ಮಾಡಲು ಹೊರಟಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಕೊಟ್ಟಿದ್ದಾರೆ, ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿಗಳ ಹೆಸರು ಹಾಕಿದ್ದಾರೆ. ಮುಖ್ಯಮಂತ್ರಿಗಳಿಗೆ ಬೇರೆ ಪೂರ್ವ ನಿಗದಿತ ಕಾರ್ಯಕ್ರಮ ಇದ್ದರೆ, ಯಾವ ಕಾರ್ಯಕ್ರಮ ಮುಖ್ಯ, ಯಾವುದಕ್ಕೆ ಆದ್ಯತೆ ಕೊಡಬೇಕು ಅನ್ನೋದನ್ನ ಅವರೇ ನಿರ್ಧಾರ ಮಾಡಬೇಕು. ಅದು ಬಿಟ್ಟು ಮುಖ್ಯಮಂತ್ರಿಗಳನ್ನ ಕೇಳಿ ಕಾರ್ಯಕ್ರಮದ ದಿನಾಂಕ, ಸಮಯ ನಿಗದಿ ಮಾಡಬೇಕು ಅನ್ನೋದು ಸರಿಯಲ್ಲ.

ಇಷ್ಟಕ್ಕೂ ರಾಜ್ಯ ಸರ್ಕಾರ ಯಾವ್ಯಾವ ಕಾರ್ಯಕ್ರಮಗಳಿಗೆ ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಸಲಹೆ ಕೇಳಿದೆ. ಕಳೆದ ಎರಡು ವರ್ಷದಲ್ಲಿ ವಿಪಕ್ಷ ನಾಯಕನಾದ ನನಗೆ ಬೆಂಗಳೂರಿನಲ್ಲಿ ಜರುಗಿದ ಸೇರಿದಂತೆ ಯಾವ ಕಾರ್ಯಕ್ರಮಕ್ಕೂ ಸಲಹೆಯನ್ನೂ ಕೇಳಿಲ್ಲ, ಆಹ್ವಾನವನ್ನೂ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮಾಡಿರೋದನ್ನೇ ಕೇಂದ್ರ ಸರ್ಕಾರ ಮಾಡಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಾಗರದಲ್ಲಿ ಇದ್ದರೂ ಕಾರ್ಯಕ್ರಮಕ್ಕೆ ಹೋಗಿಲ್ಲ. ಮಾಧ್ಯಮದವರ ಮುಂದೆ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಹೇಳಿ ಕಡೆ ಕ್ಷಣದಲ್ಲಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಶಿಷ್ಟಾಚಾರ ಪಾಲನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಎಂದು ಹೇಳಿದ್ದಾರೆ.

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ. ಆದರೆ ಯಾವುದೇ ಪತ್ರಕ್ಕೂ ಉತ್ತರ ಬಂದಿಲ್ಲ. ಈ ಹಿಂದೆ ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಅಂದಿನ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರಿಗೆ ಯಾವ ಮನೆ ಕೊಡಲಾಗಿತ್ತೋ ಅದೇ ಮನೆ ಕೊಡಿ ಎಂದು ಕೇಳಿದ್ದೇನೆ. ಅದರಲ್ಲಿ ತಪ್ಪೇನಿದೆ. ಎರಡು ವರ್ಷ ಆದರೂ ಇದುವೆರಗೂ ವಿರೋಧ ಪಕ್ಷದ ನಾಯಕನಿಗೆ ಅಧಿಕೃತ ಸರ್ಕಾರಿ ಮನೆ ಕೊಟ್ಟಿಲ್ಲ. ಇದು ಕಾಂಗ್ರೆಸ್ ಪಕ್ಷ ಶಿಷ್ಟಾಚಾರ ಪಾಲನೆ ಮಾಡುವ ಪರಿ ಎಂದು ಟೀಕಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago