ಅಕ್ಟೋಬರ್: ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…