ಅಕ್ಟೋಬರ್: ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…