ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬ್ಯಾಟಿಂಗ್ ಮಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಹೈಕಮಾಂಡ್ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದಲ್ಲಿ ಒಗ್ಗಟ್ಟಿದೆ. ನನಗೆ ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರೋದು ಕಂಡುಬಂದಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಡಿಕೆಶಿ ಅಭಿಮಾನಿಗಳು ಸಹ ಹೇಳುತ್ತಿದ್ದಾರೆ. ಅದಕ್ಕೆ ಡಿಕೆಶಿ ಏನು ಮಾಡಲು ಆಗುತ್ತದೆ. ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಚರ್ಚೆ ಆಗುತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಮಾತನಾಡುತ್ತಿದ್ದಾರೆ. ಸಿಎಂ ವಿರುದ್ಧ ಮಾತನಾಡುವವರ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಹೈಕಮಾಂಡ್ ಸ್ಟ್ರಾಂಗ್ ಇದೆ. ಈಗ ಮತ್ತಷ್ಟು ಸ್ಟ್ರಾಂಗ್ ಆಗಿದೆ ಎಂದು ಹೇಳಿದರು.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…