ರಾಜ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್‌ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.‌ವಿ.ದೇಶಪಾಂಡೆ ಬ್ಯಾಟಿಂಗ್‌ ಮಾಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದಲ್ಲಿ ಒಗ್ಗಟ್ಟಿದೆ. ನನಗೆ ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರೋದು ಕಂಡುಬಂದಿಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಡಿಕೆಶಿ ಅಭಿಮಾನಿಗಳು ಸಹ ಹೇಳುತ್ತಿದ್ದಾರೆ. ಅದಕ್ಕೆ ಡಿಕೆಶಿ ಏನು ಮಾಡಲು ಆಗುತ್ತದೆ. ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್‌ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಚರ್ಚೆ ಆಗುತ್ತಿಲ್ಲ. ಹೈಕಮಾಂಡ್‌ ಹೇಳಿದ ಮೇಲೆ ಮಾತನಾಡುತ್ತಿದ್ದಾರೆ. ಸಿಎಂ ವಿರುದ್ಧ ಮಾತನಾಡುವವರ ವಿರುದ್ಧ ಹೈಕಮಾಂಡ್‌ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಹೈಕಮಾಂಡ್ ಸ್ಟ್ರಾಂಗ್‌ ಇದೆ. ಈಗ ಮತ್ತಷ್ಟು ಸ್ಟ್ರಾಂಗ್‌ ಆಗಿದೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

1 hour ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

1 hour ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago