ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬ್ಯಾಟಿಂಗ್ ಮಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಹೈಕಮಾಂಡ್ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದಲ್ಲಿ ಒಗ್ಗಟ್ಟಿದೆ. ನನಗೆ ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರೋದು ಕಂಡುಬಂದಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಡಿಕೆಶಿ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಡಿಕೆಶಿ ಅಭಿಮಾನಿಗಳು ಸಹ ಹೇಳುತ್ತಿದ್ದಾರೆ. ಅದಕ್ಕೆ ಡಿಕೆಶಿ ಏನು ಮಾಡಲು ಆಗುತ್ತದೆ. ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಚರ್ಚೆ ಆಗುತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಮಾತನಾಡುತ್ತಿದ್ದಾರೆ. ಸಿಎಂ ವಿರುದ್ಧ ಮಾತನಾಡುವವರ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಹೈಕಮಾಂಡ್ ಸ್ಟ್ರಾಂಗ್ ಇದೆ. ಈಗ ಮತ್ತಷ್ಟು ಸ್ಟ್ರಾಂಗ್ ಆಗಿದೆ ಎಂದು ಹೇಳಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…